ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಆ.08 ರಂದು ವಿದ್ಯಾರ್ಥಿಗಳಿಗಾಗಿ “ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ ಕ್ಷೇತ್ರದ ಅರಿವು ವೃದ್ಧಿಸುವ ಉದ್ದೇಶದಿಂದ, ಉಪನ್ಯಾಸಕರ ಮಾರ್ಗದರ್ಶನದಲ್ಲಿ ಹಳೆವಿದ್ಯಾರ್ಥಿಗಳ ವಿದ್ಯಾರ್ಥಿ ತಂಡವು ಈ ಚಟುವಟಿಕೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದೀಕ್ಷಿತಾ ಎ, ಜಯಶ್ರೀ,ಚೈತ್ರಾ,ಆಂಗ್ಲ ಭಾಷಾ ಉಪನ್ಯಾಸಕರಾದ ಶುಭಕರ, ದೈಹಿಕ ಶಿಕ್ಷಣ ನಿರ್ದೆಶಕರಾದ ಪೃಥ್ವಿ ರಾಜ್ ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿನಿಯರಾದ ಫಾತಿಮಾ, ಸುರಕ್ಷಾ, ಶ್ರಾವ್ಯ, ನಿಶ್ಮಿತಾ,ಸಫಾ ತಸ್ಮಿಯಾ ಭಾಗವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ವಿಜೇತ ತಂಡವನ್ನು ಬಹುಮಾನ ನೀಡಿ ಅಭಿನಂದಿಸಲಾಯಿತು.
ಪ್ರಥಮ, ದ್ವಿತೀಯಾ, ಅಂತಿಮ ಪದವಿ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಅಂತಿಮ ಬಿ.ಕಾಂ ತೇರ್ಗಡೆಗೊಂಡ ಹಳೆ ವಿದ್ಯಾರ್ಥಿನಿ ಸುರಕ್ಷಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ , ಹಳೆ ವಿದ್ಯಾರ್ಥಿನಿ ಫಾತಿಮಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.













