August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ

ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕರು ನೀಡುತ್ತಿರುವ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ ಶಿಕ್ಷಕರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದು, ಶಾಸಕ ಹರೀಶ್ ಪೂಂಜ ಅವರಿಗೆ ಶುಭ ಹಾರೈಸಿದರು.

Related posts

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ವಿದ್ಯುತ್ ಕಾರ್ಯಗಾರ ಕೇಂದ್ರಕ್ಕೆ ಚಾಲನೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!