August 9, 2026
ಆರೋಗ್ಯ

ಉಜಿರೆಯ SDM ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಮತ್ತು MRI ಸೇವೆ,ಬೆಳ್ತಂಗಡಿ ತಾಲೂಕಿಗೆ ದೊಡ್ಡ ವರದಾನ ದಿನೇಶ್ ಪೂಜಾರಿ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕ, ಪ್ರಗತಿ-ಬಂಧು ಜ್ಞಾನ-ವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ವಲಯ, ಮೇಲಂತಬೆಟ್ಟು
ಜನಜಾಗೃತಿ ವೇದಿಕೆ ಬೆಳ್ತಂಗಡಿ ವಲಯ, ಮೇಲಂತಬೆಟ್ಟು ವಲಯ
ವಲಯ ಭಜನಾ-ಪರಿಷತ್ತು ಬೆಳ್ತಂಗಡಿ,
ವಲಯ ಶ್ರಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ವಲಯ ಇದರ ಸಂಯುಕ್ತ ಆಶ್ರಯಯದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಜಿರೆಯ SDM ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಇಲ್ಲಿಯ ತಜ್ಞ-ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ಶ್ರೀ ಮಂಜುನಾಥ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆ ಮಾಡಿದ ಕೇಂದ್ರ ಕಚೇರಿಯ ಜ್ಞಾನ-ವಿಕಾಸ ವಿಭಾಗದ ನಿರ್ದೇಶಕರಾದ ದಿನೇಶ್ ಪೂಜಾರಿಯವರು ಮನುಷ್ಯನ ಹೊರಗಿನ ಸೌಂದರ್ಯಕ್ಕಿಂತ ದೇಹದ ಒಳಗಿನ ಸೌಂದರ್ಯ ಮುಖ್ಯವಾಗಿದ್ದು,ಕಾಯಿಲೆ ಬರುವುದಕ್ಕಿಂತ ಮುಂಚಿತವಾಗಿ ಆರೋಗ್ಯ ತಪಾಸನೆಯನ್ನು ಮಾಡಿದಲ್ಲಿ ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು ಎಂಬ ನಿಟ್ಟಿನಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಉಜಿರೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಎಲ್ಲರೂ ಇದರ ಪ್ರಯೋಜನವನ್ನು ಪಡೆಯುವ೦ತಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀಯುತ ತುಕಾರಾಮರವರು ದುಬಾರಿ ಬೆಲೆಯ ವೈದ್ಯಕೀಯ ಚಿಕಿತ್ಸೆ ಇರುವಂತಹ ಈ ಕಾಲಘಟ್ಟದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ನೀಡುತ್ತಿರುವ SDM ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯವು ನಮ್ಮ ಊರಿನಲ್ಲಿ ದೊರಕುತ್ತಿರುವುದು ನಮ್ಮ ಸೌಭಾಗ್ಯ ಎಂದರು.ಎಸ್ ಡಿ ಎಂ ಆಸ್ಪತ್ರೆಯ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿಯವರಾದ ಸೌಮ್ಯರವರು SDM ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ,
ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ದಯಾನಂದ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು,

ವೇದಿಕೆಯಲ್ಲಿ ಕೇಂದ್ರಸಮಿತಿಯ ಅಧ್ಯಕ್ಷರಾದ ಸೀತಾರಾಮ್ ಆರ್ ಬೆಳ್ತಂಗಡಿ ,
SDM ತುರ್ತು ಚಿಕಿತ್ಸಾ ವಿಭಾಗದ ಮ್ಯಾನೇಜರ್ ರವೀಂದ್ರ ಗುಡಿಗಾರ್, ಯೋಜನಾಧಿಕಾರಿಯವರಾದ ಯಶೋಧರವರು,
ಒಕ್ಕೂಟದ ಅಧ್ಯಕ್ಷರಾದ ಚರಣ್ ಕುಮಾರ್,ಯಶವಂತ್, ಮಹೇಶ್,ಸಿದ್ದಪ್ಪಗೌಡ, ಸುಭಾಷಿಣಿ,ಯಶೋಧ,ರವರು, ಸೇವಾ ಪ್ರತಿನಿಧಿಗಳು ಉಪಸ್ತರಿದ್ದರು.ವಲಯ ಮೇಲ್ವಿಚಾರಕರಾದ ರವಿಯವರು ನಿರೂಪಿಸಿದರು,ಕಾರ್ಯಕ್ರಮಲ್ಲಿ ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್ ರವರು ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ರವರು ವಂದಿಸಿದರು

ಕಾರ್ಯಕ್ರಮದಲ್ಲಿ 500ಜನ ಆರೋಗ್ಯದ ತಪಾಸಣೆಯನ್ನು ಮಾಡಿದ್ದು,ಉಚಿತವಾಗಿ ಔಷಧಿ ಮತ್ತು ಕನ್ನಡಕದ ವಿತರಣೆ ಮಾಡಲಾಯಿತು.

Related posts

ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!