August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

ಬೆಳ್ತಂಗಡಿ: ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಯಾದ ಕರ್ನಾಟಕ ಟಿವಿಯು ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗಕ್ಕೆ ನೀಡುವ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾರಿಗೆ ಲಭಿಸಿದ ಹಿನ್ನೆಲೆಯಲ್ಲಿ, ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿಯ ಪದಾಧಿಕಾರಿಗಳು ಶಾಸಕರ ನಿವಾಸಕ್ಕೆ ಆಗಮಿಸಿ ಆತ್ಮೀಯವಾಗಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಶಾಸಕರು, “ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಶುಭಾಶಯಗಳು ಮತ್ತು ಅಮೂಲ್ಯ ಆಶೀರ್ವಾದಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಈ ಗೌರವವು ನನ್ನ ಮೇಲಿನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದ್ದು, ಜನಸೇವೆಗೆ ಇನ್ನೂ ಹೆಚ್ಚಿನ ಬದ್ಧತೆಯಿಂದ ಕಾರ್ಯನಿರ್ವಹಿಸಲು ಸದಾ ಪ್ರೇರಣೆಯಾಗಲಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಮಹಿಳಾ ವಿಭಾಗದ ಅಧ್ಯಕ್ಷೆ ವಸುದಾ ಶೆಟ್ಟಿ, ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಬಂಟ ಸಮಾಜದ ಎಲ್ಲಾ ನಿರ್ದೇಶಕರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

Related posts

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ಜೆಸಿಐ ಮಡಂತ್ಯಾರಿಗೆ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!