August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ‘ಆಟಿದ ಐತ್ತಾರ’ ಮತ್ತು ಮಾಸಿಕ ಸಭೆ

ಅರಸಿನಮಕ್ಕಿ: ಇಲ್ಲಿಯ ಮೂಲ್ಯರ ಯಾನೆ ಕುಲಾಲರ ಸಂಘದ 31 ವರ್ಷದ 7ನೇ ಮಾಸಿಕ ಸಭೆ ಮತ್ತು ಆಟಿದ ಐತ್ತಾರ ಕಾರ್ಯಕ್ರಮವು ಆ.9ರಂದು ಅರಸಿನಮಕ್ಕಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಮಾರಂಭ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಂಗಾಧರ ಕೆ. ಕುಲಾಲ್ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ನಾಟಕ ರಚನೆಗಾರ ಯು.ರುಕ್ಮಯ್ಯ ಕುಲಾಲ್ ಉಪ್ಪರಡ್ಕ, ಹಾಗೂ ಕೃಷಿಕರಾದ ಉಮೇಶ್ ಕುಲಾಲ್ ಭಾಗವಹಿಸಿದರು.

ಕಟ್ಟಡ ನಿಧಿಯ ಅಧ್ಯಕ್ಷ ಐತ್ತಪ್ಪ ಕುಲಾಲ್, ವಿದ್ಯಾ ನಿಧಿಯ ಅಧ್ಯಕ್ಷ ಕೃಷ್ಣಪ್ಪ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಟಿ ತಿಂಗಳ ವಿಶೇಷತೆಯನ್ನು ಅರಸಿನಮಕ್ಕಿ ಕುಲಾಲರ ಸಂಘದ 49 ಮನೆಯವರು ಅವರ ಅವರ ಮನೆಯಲ್ಲಿ ಮಾಡಿದ 49 ಬಗ್ಗೆಯ ತಿಂಡಿ-ತಿನುಸುಗಳನ್ನು ತಂದು ಆಟಿಯನ್ನು ಬಹಳ ಸಂಭ್ರಮದಿಂದ ಆಚರಿಸಿದರು.

ಸಂಘದ ವರದಿಯನ್ನು ಕಾರ್ಯದರ್ಶಿ ಅಶೋಕ್ ಕುಲಾಲ್, ವಿದ್ಯಾನಿಧಿಯ ಕಾರ್ಯದರ್ಶಿ ಗುರುಪ್ರಸಾದ್, ಕಟ್ಟಡ ವರದಿಯನ್ನು ರೋಶಾಂತ್ ಕುಲಾಲ್ ಓದಿದರು.

ಕು| ಸಾನ್ವಿತ ಪ್ರಾರ್ಥಿಸಿ, ಯತೀಶ್ ಕುಲಾಲ್ ಸ್ವಾಗತಿಸಿದರು. ಜೀವನ್, ಯತೀಶ್, ಯು.ಸಿ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಮೋನಿಶ್ ಕುಲಾಲ್ ವಂದಿಸಿದರು.

Related posts

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya
error: Content is protected !!