August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: “ನಮ್ಮ ಹಿರಿಯರು ಹೊಟ್ಟೆಪಾಡಿಗಾಗಿ ದುಡಿದ ಕಥೆಯನ್ನು ನೆನಪಿಸುವ ದಿನವೇ ಇಂದಿನ ‘ಆಟಿಡೊಂಜಿ ದಿನ’ದ ಹಿನ್ನೆಲೆಯಾಗಿದೆ,” ಎಂದು ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ರವೀಶ್ ಪಡುಮಲೆ ಹೇಳಿದರು.

ಇವರು ಆ. 10ರಂದು ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನಡೆದ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಆಟಿ ತಿಂಗಳ ಸಂಪ್ರದಾಯಗಳು, ಆಟಿ ಕಳೆಂಜನ ಕಥೆ ಹಾಗೂ ಆಟಿ ಅಮಾವಾಸ್ಯೆ ಆಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮೌಲ್ಯಯುತ ಮಾಹಿತಿ ನೀಡಿದರು.

ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಮನೆ ಮಾಡಿತ್ತು. ತೆಂಗಿನ ಗರಿಗಳಿಂದ ತಯಾರಿಸಿದ ವಿವಿಧ ಕಲಾಕೃತಿಗಳು ಹಾಗೂ ಅಲಂಕಾರಗಳಿಂದ ಶಾಲೆಯು ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು. ಶಾಲೆಯ ಮೂಲೆ ಮೂಲೆಗಳಲ್ಲಿಯೂ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಆಹಾರ ವೈವಿಧ್ಯವನ್ನು ಬಿಂಬಿಸುವ ವಿವಿಧ ಭಕ್ಷ್ಯ-ಭೋಜ್ಯಗಳು ಹಾಗೂ ಆಟಿಯಲ್ಲಿ ಆಡುವ ವಿಶೇಷ ದೇಸಿ ಆಟಗಳು ಗಮನ ಸೆಳೆದವು.

ವಿದ್ಯಾರ್ಥಿಗಳಿಂದ ತುಳುನಾಡು ಮತ್ತು ತುಳು ಭಾಷೆಗೆ ಸಂಬಂಧಿಸಿದ ಹಾಡುಗಳು, ಗಾದೆಗಳು, ಸಂಧಿ ಪಾಡ್ದನ, ನಾಟಕ ಹಾಗೂ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಅಲ್ಲದೆ, ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಭಿತ್ತಿಪತ್ರಿಕೆಗಳ ಪ್ರದರ್ಶನವೂ ನಡೆಯಿತು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಕೆ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಎಂ. ಶ್ರದ್ಧಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಕೆ.ಜಿ. ಸ್ವಾಗತಿಸಿದರು.

Related posts

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!