August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ: ಶಾಸಕ ಹರೀಶ್ ಪೂಂಜ ಭಾಗಿ

ಕಣಿಯೂರು: ಕಣಿಯೂರು ಗ್ರಾಮ ಪದ್ಮುoಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ ನಡೆಯಿತು.

ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಇವರು ಅಧ್ಯಕ್ಷತೆ ವಹಿಸಿ ಎಂಡೋಸಲ್ಫಾನ್ ಸಂತ್ರಸ್ತರ ನೆರವಿಗಾಗಿ ಶಾಸಕ ಹರೀಶ್ ಪೂಂಜಾರವರು ನಡೆಸಿದ ಹೋರಾಟವನ್ನು ನೆನಪಿಸಿಕೊಂಡರು. ಕಣಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು,

ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಾಸಿಂ ಪದ್ಮುಂಜ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಸಕ ಹರೀಶ್ ಪೂಂಜ ಅವರು ಸಂತ್ರಸ್ತರ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಕುಂದು-ಕೊರತೆಗಳನ್ನು ಪರಿಶೀಲಿಸಿದರು ಹಾಗೂ ಸಂತ್ರಸ್ತರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕೃಷ್ಣಯ್ಯ ಆಚಾರ್ಯ, ಮಹೇಶ್ ಜೇoಕ್ಯಾರ್, ಆಸ್ಪತ್ರೆ ಸಿಬ್ಬಂದಿ ಸುಂದರಿ ಅವರು ಹಳೆ ಕಾಲದ ನೇಜಿದ ಸಂದಿ ಪಾಡ್ಡನ ನಡೆಸಿಕೊಟ್ಟರು. ಸಂತ್ರಸ್ತರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಹಲವು ಬಗೆಯ ವಸ್ತುಗಳನ್ನು ಸಂಗ್ರಹಿಸಿ ಸಂತ್ರಸ್ತರಿಗೆ ಪರಿಚಯಿಸಲಾಯಿತು. ಮೇಲ್ವಿಚಾರಕಿ ಶ್ರೀಮತಿ ಚಂದ್ರಿಕಾ, ಫಿಸಿಯೋಥೆರಪಿಸ್ಟ್ ರಶ್ಮಿತಾ, ಕೌಶಲ್ಯ ತರಬೇತಿ ಅಧ್ಯಾಪಕಿ ವಿನಯ,ಸಿಬ್ಬಂದಿಗಳಾದ ಶಾಲಿನಿ, ಪ್ರಮೀಳಾ, ಉಷಾ,ಹಾಗೂ ಪೋಷಕರು ಮತ್ತು ಸಂತ್ರಸ್ತರು ಉಪಸ್ಥಿತರಿದ್ದರು.
ಶಿಕ್ಷಕಿ ಸುಜಾತ ಸ್ವಾಗತಿಸಿ, ರಶ್ಮಿತಾ ಧನ್ಯವಾದವಿತ್ತರು.

Related posts

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya
error: Content is protected !!