August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಆಟಿದ ಲೇಸ್ – ರುಚಿ ಮತ್ತು ಸಂಸ್ಕೃತಿಯ ಸಂಗಮ”ವನ್ನು ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ಯಕ್ಷಗಾನ ಕಲಾವಿದರು ಹಾಗೂ ಪ್ರಗತಿಪರ ಕೃಷಿಕರಾದ ಗಂಗಾಧರ ಕೆ ಕಾಯರ್ತಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಿ ತುಳುನಾಡು ಹಾಗೂ ಆಟಿ ತಿಂಗಳ ವೈಜ್ಞಾನಿಕ ಹಿನ್ನಲೆ-ಆರೋಗ್ಯ, ಮಹತ್ವ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಗೀತಾ ಮಾತನಾಡಿ ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ನೆನಪುಗಳನ್ನು ಹಂಚಿಕೊಂಡರು. ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ಸಾಂಸ್ಕೃತಿಕ ಸಂಘದ ಮುಖ್ಯಸ್ಥರಾದ ಪದ್ಮನಾಭ ಬಿ ಕೆ ಸ್ವಾಗತಿಸಿ, ಮನಃಶಾಸ್ತ್ರ ಉಪನ್ಯಾಸಕಿ ನಮಿತಾ ಕೆ ಆರ್ ವಂದಿಸಿದರು.
ತುಳುನಾಡಿನ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವ ತುಳು ಸಾಂಸ್ಕೃತಿಕ ಕಾರ್ಯಕ್ರಮ, ಎದುರು ಕಥೆ, ಪ್ರಹಸನ, ಆಟಿ ತಿಂಗಳ ತಿನಿಸುಗಳ ಪ್ರದರ್ಶನ ಹಾಗೂ ಆಟಿಯ ಸಹಭೋಜನವು ಕಾರ್ಯಕ್ರಮದ ವಿಶೇಷವಾಗಿತ್ತು.

Related posts

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya
error: Content is protected !!