August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆಯು ವಲಯ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ ಇವರ ಅಧ್ಯಕ್ಷತೆಯಲ್ಲಿ ವಲಯದ ಯೋಜನಾ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ರಾಜ್ಯ ಅಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ಪರಿಷತ್ತಿನ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ತಾಲೂಕು ಅಧ್ಯಕ್ಷ ರವಿರಾಜ್ ಚಾರ್ಮಾಡಿ, ತಾಲೂಕು ಭಜನಾ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ್ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶ್ರೀಮತಿ ಪೂರ್ಣಿಮಾ, ಭಜನಾ ಪರಿಷತ್ತಿನ ಇನ್ನಿತರ ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳು ಮತ್ತು ವಿವಿಧ ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ಜಿಲ್ಲಾ ಸಮನ್ವಯ ಅಧಿಕಾರಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮುಂದಿನ ತಿಂಗಳು ನಡೆಯಲಿರುವ ಭಜನಾ ಕಮ್ಮಟದ ಬಗ್ಗೆ ವಿವರಿಸುತ್ತಾ ಶಿಬಿರಾರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಚರ್ಚಿಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ ಕೆಲವೊಂದು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸೇವಾ ಪ್ರತಿನಿಧಿ ಶ್ರೀಮತಿ ಸರಿತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಶ್ರೀಮತಿ ದಿಶಾ ವಂದಿಸಿದ್ದರು.

Related posts

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ತಯಾರಿ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು

Suddi Udaya
error: Content is protected !!