August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಮಾದಕವಸ್ತು ವಿರುದ್ಧ ಬೆಳ್ತಂಗಡಿ ಉಪವಿಭಾಗ ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇದೀಗ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಆ.9ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ವೇಣೂರು ಮೇಲಿನ ಪೇಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿರುವುದು ಕಂಡುಬಂದಿದೆ. ವಿಚಾರಣೆ ನಡೆಸಿದಾಗ ಆತ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ನಿವಾಸಿ ಮಹಮ್ಮದ್ ಆಸೀಫ್ (35) ಎಂದು ತಿಳಿದುಬಂದಿದ್ದು, ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ 27(b) ಮತ್ತು 22(a) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!