August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

ಬೆಳ್ತಂಗಡಿ: ಬೆಳ್ತಂಗಡಿಯಿಂದ ತೆರಳಿದ್ದ ಯಾತ್ರಾರ್ಥಿಗಳ ತಂಡವು ಕಳೆದ ನಾಲ್ಕು ದಿನಗಳಲ್ಲಿ ಶಿರ್ಡಿ ಸಾಯಿಬಾಬಾ ಕ್ಷೇತ್ರ, ಶನಿ ಶಿಂಗಣಾಪುರ, ಭೀಮಾಶಂಕರ ಜ್ಯೋತಿರ್ಲಿಂಗ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆದರು.

ಶಿರ್ಡಿಯಲ್ಲಿ ಸಾಯಿಬಾಬಾ ಅವರ ಸಮಾಧಿ ಮಂದಿರದಲ್ಲಿ ದರ್ಶನ ಪಡೆದ ಯಾತ್ರಾರ್ಥಿಗಳು, ಸಾಯಿಬಾಬಾ ಅವರ ತಪೋಭೂಮಿ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಿದರು.
ಬಳಿಕ ಶನಿ ಶಿಂಗಣಾಪುರ ಹಾಗೂ ಭೀಮಾಶಂಕರ ಜ್ಯೋತಿರ್ಲಿಂಗ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನ ನೆರವೇರಿಸಿದರು.

ಈ ಸಂದರ್ಭದಲ್ಲಿ ಹರಿಯಾಣದ ಪ್ರಸಿದ್ಧ ನಿತ್ಯಾನಂದ ಧಾಮ, ಸಾಂಪ್ಲಾದ ಶ್ರೀ ಶ್ರೀ ಶ್ರೀ 1008 ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರನ್ನು ಶನಿ ಶಿಂಗಣಾಪುರ ಕ್ಷೇತ್ರದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗುರುಗಳೆಂದು ಪ್ರಸಿದ್ಧರಾಗಿರುವ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆಯುವ ಅವಕಾಶ ಯಾತ್ರಾರ್ಥಿಗಳಿಗೆ ವಿಶೇಷ ಅನುಭವವಾಯಿತು.

ನಾಲ್ಕೂರು ಮಜ್ಜೇನಿಬೈಲು ಅನಂತರಾಮ ಹೊಳ್ಳ ಅವರ ನೇತೃತ್ವದಲ್ಲಿ ಈ ಯಾತ್ರೆ ಕೈಗೊಳ್ಳಲಾಗಿತ್ತು.ಯಾತ್ರೆಯಲ್ಲಿ ವಿಶ್ವನಾಥ ಹೊಳ್ಳ, ಪ್ರವೀಣ್ ಕುಮಾರ್ ಎಚ್.ಎಸ್., ಮನೋಹರ್ ಬಳಂಜ, ಸಂತೋಷ್ ಪಿ. ಕೋಟ್ಯಾನ್ ಬಳಂಜ, ರಾಜೇಶ್ ಪೂಜಾರಿ ಮೂಡುಕೋಡಿ, ಚಿದಾನಂದ ಇಡ್ಯ, ಜಯ ಪೂಜಾರಿ ಮಂಗಳೂರು, ಲೋಹಿತ್ ಕುಮಾರ್, ಶೇಖರ್ ಶೆಟ್ಟಿ ಕರ್ಮಿತ್ತಿಲ್,ನವೀನ್,ವಿನಯ್ ಶೆಟ್ಟಿ, ನಾಗರಾಜ್ ಸೇರಿದಂತೆ ಹಲವು ಯಾತ್ರಾರ್ಥಿಗಳು ಉಪಸ್ಥಿತರಿದ್ದರು.

Related posts

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!