August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಿಂದ ಆಟಿ ಕೂಟ ಸಂಭ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮತ್ತು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ಸಹಯೋಗದಲ್ಲಿ ನಡೆದ ಆಟಿದ ರಂಗ್ ಕಾರ್ಯಕ್ರಮವು ಬೆಳ್ತಂಗಡಿ ಮುಳಿಯ ಸಂಸ್ಥೆಯ ಮೇಲಿನ ಮಹಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ JFD ಜಿತೇಶ್ ಕುಮಾರ್ ವಹಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಳಿಯ ಜ್ಯುವೆಲರ್ಸ್ ಬೆಳ್ತಂಗಡಿ ಇದರ ಸಹಾಯಕ ವ್ಯವಸ್ಥಾಪಕ ಆದ ಸುಧೀರ್ ಸುವರ್ಣ ನೆರವೇರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಇವರು ಆಟಿ ತಿಂಗಳ ಹಿಂದಿನ ಸಂಪ್ರದಾಯಕತೆಯ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ (G&D) ವಿಭಾಗದ ನಿರ್ದೇಶಕರಾದ ಜೆಸಿ ರಂಜಿತ್ HD, ಬೀಟ್ ರಾಕರ್ಸ್ ಸಂಸ್ಥೆಯ ಹಿರಿಯ ಪೋಷಕರಾದ ಶ್ರೀಮತಿ ಸರೋಜ, ನಿಕಟ ಪೂರ್ವ ಅಧ್ಯಕ್ಷ ಆಶಾಳತಾ ಪ್ರಶಾಂತ್, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ, ಲೇಡಿ ಜೆಸಿ ಸoಯೋಜಕಿ ಪ್ರತಿಮಾ ಗೌಡ, ಜೆಜೆಸಿ ಅಧ್ಯಕ್ಷರಾದ ತೇಜಸ್ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನೃತ್ಯ ಹಾಗೂ ವಿವಿಧ ಆಟೋಟ ಸ್ಪರ್ಧೆಯೊಂದಿಗೆ ಯಶಸ್ವಿಯಾಯಿತು
ವಿಶೇಷವಾಗಿ 52ಬಗೆಯ ತಿಂಡಿ ತಿನಿಸು ಆಕರ್ಷನಿಯವಾಗಿತ್ತು. ಬೀಟ್ ರಾಕರ್ಸ್ ಸಂಸ್ಥೆಯ ಪೋಷಕರು ಹಾಗೂ ಜೆಸಿಐ ಸದಸ್ಯರು ಆಟಿ ತಿಂಗಳ ತಿಂಡಿ ತಿನಿಸು ತಂದು ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 160 ಜನ ಭಾಗವಹಿಸಿದರು.

ವೇದಿಕೆ ಅಹ್ವಾನವನ್ನು ಪೂರ್ವಧ್ಯಕ್ಷ ಜೆಸಿ ನಾರಾಯಣ ಶೆಟ್ಟಿ, ಜೆಸಿ ವಾಣಿಯನ್ನು ಶ್ರೀಮತಿ ನೀತಾ ಕೆ.ಎಸ್, ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಬೆಳ್ತಂಗಡಿ ಎಸ್.ಡಿ.ಎಮ್ ಸ್ಕೂಲ್ ಶಿಕ್ಷಕಿ ಶ್ರೀಮತಿ ಸೌಮ್ಯ ನೆರವೇರಿಸಿದರು. ಕಾರ್ಯದರ್ಶಿ ಜೆಸಿ ರಕ್ಷಿತ್ ಧನ್ಯವಾದ ಸಲ್ಲಿಸಿದರು.

Related posts

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya
error: Content is protected !!