August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

ಬೆಳ್ತಂಗಡಿ: ಬೆಳ್ತಂಗಡಿಯಿಂದ ತೆರಳಿದ್ದ ಯಾತ್ರಾರ್ಥಿಗಳ ತಂಡವು ಕಳೆದ ನಾಲ್ಕು ದಿನಗಳಲ್ಲಿ ಶಿರ್ಡಿ ಸಾಯಿಬಾಬಾ ಕ್ಷೇತ್ರ, ಶನಿ ಶಿಂಗಣಾಪುರ, ಭೀಮಾಶಂಕರ ಜ್ಯೋತಿರ್ಲಿಂಗ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆದರು.

ಶಿರ್ಡಿಯಲ್ಲಿ ಸಾಯಿಬಾಬಾ ಅವರ ಸಮಾಧಿ ಮಂದಿರದಲ್ಲಿ ದರ್ಶನ ಪಡೆದ ಯಾತ್ರಾರ್ಥಿಗಳು, ಸಾಯಿಬಾಬಾ ಅವರ ತಪೋಭೂಮಿ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಿದರು.
ಬಳಿಕ ಶನಿ ಶಿಂಗಣಾಪುರ ಹಾಗೂ ಭೀಮಾಶಂಕರ ಜ್ಯೋತಿರ್ಲಿಂಗ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನ ನೆರವೇರಿಸಿದರು.

ಈ ಸಂದರ್ಭದಲ್ಲಿ ಹರಿಯಾಣದ ಪ್ರಸಿದ್ಧ ನಿತ್ಯಾನಂದ ಧಾಮ, ಸಾಂಪ್ಲಾದ ಶ್ರೀ ಶ್ರೀ ಶ್ರೀ 1008 ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರನ್ನು ಶನಿ ಶಿಂಗಣಾಪುರ ಕ್ಷೇತ್ರದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗುರುಗಳೆಂದು ಪ್ರಸಿದ್ಧರಾಗಿರುವ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆಯುವ ಅವಕಾಶ ಯಾತ್ರಾರ್ಥಿಗಳಿಗೆ ವಿಶೇಷ ಅನುಭವವಾಯಿತು.

ನಾಲ್ಕೂರು ಮಜ್ಜೇನಿಬೈಲು ಅನಂತರಾಮ ಹೊಳ್ಳ ಅವರ ನೇತೃತ್ವದಲ್ಲಿ ಈ ಯಾತ್ರೆ ಕೈಗೊಳ್ಳಲಾಗಿತ್ತು.ಯಾತ್ರೆಯಲ್ಲಿ ವಿಶ್ವನಾಥ ಹೊಳ್ಳ, ಪ್ರವೀಣ್ ಕುಮಾರ್ ಎಚ್.ಎಸ್., ಮನೋಹರ್ ಬಳಂಜ, ಸಂತೋಷ್ ಪಿ. ಕೋಟ್ಯಾನ್ ಬಳಂಜ, ರಾಜೇಶ್ ಪೂಜಾರಿ ಮೂಡುಕೋಡಿ, ಚಿದಾನಂದ ಇಡ್ಯ, ಜಯ ಪೂಜಾರಿ ಮಂಗಳೂರು, ಲೋಹಿತ್ ಕುಮಾರ್, ಶೇಖರ್ ಶೆಟ್ಟಿ ಕರ್ಮಿತ್ತಿಲ್,ನವೀನ್,ವಿನಯ್ ಶೆಟ್ಟಿ, ನಾಗರಾಜ್ ಸೇರಿದಂತೆ ಹಲವು ಯಾತ್ರಾರ್ಥಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya
error: Content is protected !!