ಗುರುವಾಯನಕೆರೆ: ವಿದ್ಯಾಭಾರತಿ ಸಹಭಾಗಿತ್ವದಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರ ಇಲ್ಲಿ ಆ.09 ರಂದು ನಡೆದ ಜಿಲ್ಲಾಮಟ್ಟದ 17 ಮತ್ತು 14ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.
ಎಂಟನೇ ತರಗತಿಯ ವರ್ಣಿಕ 60 KG ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
7ನೇ ತರಗತಿಯ ಸನ್ವಿತ್ 45 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ, ಎಂಟನೇ ತರಗತಿಯ ಸಾಹಿತ್ ಎಸ್ ಆಚಾರ್ಯ 55 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ ಗೆದ್ದಿದ್ದಾರೆ.
ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಟೆಕ್ನೋ ಸ್ಕೂಲ್ನ ಪ್ರಾಂಶುಪಾಲರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.













