August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ‘ಆಟಿದ ಐತ್ತಾರ’ ಮತ್ತು ಮಾಸಿಕ ಸಭೆ

ಅರಸಿನಮಕ್ಕಿ: ಇಲ್ಲಿಯ ಮೂಲ್ಯರ ಯಾನೆ ಕುಲಾಲರ ಸಂಘದ 31 ವರ್ಷದ 7ನೇ ಮಾಸಿಕ ಸಭೆ ಮತ್ತು ಆಟಿದ ಐತ್ತಾರ ಕಾರ್ಯಕ್ರಮವು ಆ.9ರಂದು ಅರಸಿನಮಕ್ಕಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಮಾರಂಭ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಂಗಾಧರ ಕೆ. ಕುಲಾಲ್ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ನಾಟಕ ರಚನೆಗಾರ ಯು.ರುಕ್ಮಯ್ಯ ಕುಲಾಲ್ ಉಪ್ಪರಡ್ಕ, ಹಾಗೂ ಕೃಷಿಕರಾದ ಉಮೇಶ್ ಕುಲಾಲ್ ಭಾಗವಹಿಸಿದರು.

ಕಟ್ಟಡ ನಿಧಿಯ ಅಧ್ಯಕ್ಷ ಐತ್ತಪ್ಪ ಕುಲಾಲ್, ವಿದ್ಯಾ ನಿಧಿಯ ಅಧ್ಯಕ್ಷ ಕೃಷ್ಣಪ್ಪ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಟಿ ತಿಂಗಳ ವಿಶೇಷತೆಯನ್ನು ಅರಸಿನಮಕ್ಕಿ ಕುಲಾಲರ ಸಂಘದ 49 ಮನೆಯವರು ಅವರ ಅವರ ಮನೆಯಲ್ಲಿ ಮಾಡಿದ 49 ಬಗ್ಗೆಯ ತಿಂಡಿ-ತಿನುಸುಗಳನ್ನು ತಂದು ಆಟಿಯನ್ನು ಬಹಳ ಸಂಭ್ರಮದಿಂದ ಆಚರಿಸಿದರು.

ಸಂಘದ ವರದಿಯನ್ನು ಕಾರ್ಯದರ್ಶಿ ಅಶೋಕ್ ಕುಲಾಲ್, ವಿದ್ಯಾನಿಧಿಯ ಕಾರ್ಯದರ್ಶಿ ಗುರುಪ್ರಸಾದ್, ಕಟ್ಟಡ ವರದಿಯನ್ನು ರೋಶಾಂತ್ ಕುಲಾಲ್ ಓದಿದರು.

ಕು| ಸಾನ್ವಿತ ಪ್ರಾರ್ಥಿಸಿ, ಯತೀಶ್ ಕುಲಾಲ್ ಸ್ವಾಗತಿಸಿದರು. ಜೀವನ್, ಯತೀಶ್, ಯು.ಸಿ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಮೋನಿಶ್ ಕುಲಾಲ್ ವಂದಿಸಿದರು.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya
error: Content is protected !!