August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಿಂದ ಆಟಿ ಕೂಟ ಸಂಭ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮತ್ತು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ಸಹಯೋಗದಲ್ಲಿ ನಡೆದ ಆಟಿದ ರಂಗ್ ಕಾರ್ಯಕ್ರಮವು ಬೆಳ್ತಂಗಡಿ ಮುಳಿಯ ಸಂಸ್ಥೆಯ ಮೇಲಿನ ಮಹಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ JFD ಜಿತೇಶ್ ಕುಮಾರ್ ವಹಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಳಿಯ ಜ್ಯುವೆಲರ್ಸ್ ಬೆಳ್ತಂಗಡಿ ಇದರ ಸಹಾಯಕ ವ್ಯವಸ್ಥಾಪಕ ಆದ ಸುಧೀರ್ ಸುವರ್ಣ ನೆರವೇರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಇವರು ಆಟಿ ತಿಂಗಳ ಹಿಂದಿನ ಸಂಪ್ರದಾಯಕತೆಯ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ (G&D) ವಿಭಾಗದ ನಿರ್ದೇಶಕರಾದ ಜೆಸಿ ರಂಜಿತ್ HD, ಬೀಟ್ ರಾಕರ್ಸ್ ಸಂಸ್ಥೆಯ ಹಿರಿಯ ಪೋಷಕರಾದ ಶ್ರೀಮತಿ ಸರೋಜ, ನಿಕಟ ಪೂರ್ವ ಅಧ್ಯಕ್ಷ ಆಶಾಳತಾ ಪ್ರಶಾಂತ್, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ, ಲೇಡಿ ಜೆಸಿ ಸoಯೋಜಕಿ ಪ್ರತಿಮಾ ಗೌಡ, ಜೆಜೆಸಿ ಅಧ್ಯಕ್ಷರಾದ ತೇಜಸ್ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನೃತ್ಯ ಹಾಗೂ ವಿವಿಧ ಆಟೋಟ ಸ್ಪರ್ಧೆಯೊಂದಿಗೆ ಯಶಸ್ವಿಯಾಯಿತು
ವಿಶೇಷವಾಗಿ 52ಬಗೆಯ ತಿಂಡಿ ತಿನಿಸು ಆಕರ್ಷನಿಯವಾಗಿತ್ತು. ಬೀಟ್ ರಾಕರ್ಸ್ ಸಂಸ್ಥೆಯ ಪೋಷಕರು ಹಾಗೂ ಜೆಸಿಐ ಸದಸ್ಯರು ಆಟಿ ತಿಂಗಳ ತಿಂಡಿ ತಿನಿಸು ತಂದು ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 160 ಜನ ಭಾಗವಹಿಸಿದರು.

ವೇದಿಕೆ ಅಹ್ವಾನವನ್ನು ಪೂರ್ವಧ್ಯಕ್ಷ ಜೆಸಿ ನಾರಾಯಣ ಶೆಟ್ಟಿ, ಜೆಸಿ ವಾಣಿಯನ್ನು ಶ್ರೀಮತಿ ನೀತಾ ಕೆ.ಎಸ್, ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಬೆಳ್ತಂಗಡಿ ಎಸ್.ಡಿ.ಎಮ್ ಸ್ಕೂಲ್ ಶಿಕ್ಷಕಿ ಶ್ರೀಮತಿ ಸೌಮ್ಯ ನೆರವೇರಿಸಿದರು. ಕಾರ್ಯದರ್ಶಿ ಜೆಸಿ ರಕ್ಷಿತ್ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!