August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್‌ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನ

ಬೆಳ್ತಂಗಡಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

“ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ “Say NO to Drugs, Say YES to the Future”ಎಂಬ ಘೋಷವಾಕ್ಯದೊಂದಿಗೆ ನಡೆಯಲಿರುವ ಅಭಿಯಾನದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಯುವಜನರ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು.

ಮಾದಕ ವ್ಯಸನವು ಕೇವಲ ವ್ಯಕ್ತಿಯ ಜೀವನವನ್ನು ಮಾತ್ರವಲ್ಲದೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳು ಮಾಡುತ್ತದೆ. ಆದ್ದರಿಂದ ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು, ಕ್ರೀಡೆ, ಶಿಕ್ಷಣ, ಉದ್ಯೋಗ, ಸಾಮಾಜಿಕ ಸೇವೆ ಸೇರಿದಂತೆ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಸಂದೇಶವನ್ನು ಅಭಿಯಾನದ ಮೂಲಕ ನೀಡಲಾಗುತ್ತಿದೆ.

“ಮಾದಕ ವ್ಯಸನಕ್ಕೆ ಯುವಜನತೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ. ನಮ್ಮ ಕುಟುಂಬ, ಸಮಾಜ ಮತ್ತು ಬೆಳ್ತಂಗಡಿಯ ಸುರಕ್ಷಿತ ಭವಿಷ್ಯಕ್ಕಾಗಿ ಡ್ರಗ್ಸ್ ವಿರುದ್ಧ ಒಗ್ಗಟ್ಟಾಗಿ ಧ್ವನಿ ಎತ್ತಬೇಕು” ಎಂಬ ಕರೆ ನೀಡಲಾಗಿದೆ.

ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ನಡೆಯುತ್ತಿರುವ ಈ ಜಾಗೃತಿ ಅಭಿಯಾನಕ್ಕೆ ಯುವಜನರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಕೈಜೋಡಿಸುವಂತೆ ಮನವಿ ಮಾಡಲಾಗಿದೆ.

Related posts

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!