25.1 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

ಬೆಳ್ತಂಗಡಿ: ಭಾರೀ ಮಳೆಯಿಂದ ಲಾಯಿಲ ಗ್ರಾಮದ ಪುತ್ರಬೈಲು, ಗುರಿಂಗಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸೋಮಾವತಿ ನದಿಯಲ್ಲಿ ಉಕ್ಕಿ ಬಂದ ಪ್ರವಾಹದಿಂದ ಹಲವು ಮನೆಗಳು ಜಲಾವೃತಗೊಂಡು ಹಾನಿ ಉಂಟಾಗಿದ್ದು , ಅ 5 ರಂದು ಉಸ್ತುವಾರಿ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗುರಿಂಗಾನ ರಸ್ತೆಯಲ್ಲಿ ಹಲವು ವರ್ಷಗಳಿಂದ ಬೀದಿ ದೀಪಗಳ ಕೊರತೆಯಿದ್ದು, ಈ ಬಗ್ಗೆ ಪಂಚಾಯತ್ ಗೆ
ಹಲವು ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿಲ್ಲ ಎಂದು ಸ್ಥಳೀಯರು ಸಚಿವ ಯು.ಟಿ. ಖಾದರ್ ಹಾಗೂ ರಕ್ಷಿತ್ ಶಿವರಾಂ ಅವರ ಗಮನಕ್ಕೆ ತಂದರು.

ಸ್ಥಳೀಯರ ಸಮಸ್ಯೆಯನ್ನು ಆಲಿಸಿದ ಸಚಿವರು, ತಕ್ಷಣವೇ ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ತಾರನಾಥ್ ಅವರಲ್ಲಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದೇ ವೇಳೆ ರಕ್ಷಿತ್ ಶಿವರಾಂ ಅವರು ಬೀದಿ ದೀಪಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಸಚಿವರ ಸೂಚನೆಗೆ ತಕ್ಷಣ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಂಬಗಳಲ್ಲಿ ಎಚ್ ಟಿ ಲೈನ್ ಮಾತ್ರ ಇದ್ದು ಅದಕ್ಕೆ ಎಲ್ ಟಿ ವಿದ್ಯುತ್ ಲೈನ್ ಎಳೆದು ಗುರಿಂಗಾನ ರಸ್ತೆ ಬದಿ ಹೊಸ ಬೀದಿ ದೀಪಗಳನ್ನು ಅಳವಡಿಸಿದೆ. ಇದರಿಂದ ಹಲವು ವರ್ಷಗಳಿಂದ ಗ್ರಾಮಸ್ಥರು ಎದುರು ನೋಡುತ್ತಿದ್ದ ಬೇಡಿಕೆ ಈಡೇರಿದಂತಾಗಿದೆ.

ಬೀದಿ ದೀಪಗಳ ಕೊರತೆಯಿಂದ ರಾತ್ರಿ ವೇಳೆ ವಿದ್ಯಾರ್ಥಿಗಳು , ಮಹಿಳೆಯರು , ಸಾರ್ವಜನಿಕರು ಹಾಗೂ ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇದೀಗ ಹೊಸ ದೀಪಗಳ ಅಳವಡಿಕೆಯಿಂದ ರಾತ್ರಿ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆಯೂ ಹೆಚ್ಚಲಿದೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!