25.1 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜನರ ಹಕ್ಕುಗಳನ್ನು ಖಾತ್ರಿ ಪಡಿಸದೆ ಭೌತಿಕ ಸರ್ವೆ ಮಾಡದೆ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆ: ಹರೀಶ್ ಎಳನೀರ್

ಬೆಳ್ತಂಗಡಿ: ಸರ್ಕಾರಗಳು ನೀತಿಯನ್ನು ರೂಪಿಸುವ ಮೊದಲು ಜನ ಸಮೂಹದ ಜೊತೆ ಸಂವಾದಗಳನ್ನು ಮಾಡಬೇಕು ವಾಸ್ತವ ಸ್ಥಿತಿಯನ್ನು ಅರಿತು ಕಾನೂನುಗಳನ್ನು ಜಾರಿಗೆ ತರಬೇಕೆ ಹೊರತು. ಸರ್ವಾಧಿಕಾರದ ರೀತಿಯಲ್ಲಿ ವರ್ತನೆ ಮಾಡುವುದು ಸಮಂಜಸವಲ್ಲ. ಜನಪ್ರತಿನಿಧಿಗಳು ವಿಶೇಷವಾಗಿ ಶಾಸಕರು ಸಂಸದರು ಈ ಬಗ್ಗೆ ವಸ್ತುನಿಷ್ಠವಾಗಿ ಕಾನೂನಿನ ಮಜಲುಗಳನ್ನು ಅಧ್ಯಯನ ಮಾಡಿ ಧ್ವನಿಯೆತ್ತಬೇಕು. ರಾಜ್ಯ ಸರ್ಕಾರ ಯಾವ ಜನವಸತಿ ಪ್ರದೇಶಗಳನ್ನು ಬಿಟ್ಟು ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡಬೇಕು. ಜನರ ಹಕ್ಕುಗಳು ವಿಶೇಷವಾಗಿ ಅರಣ್ಯ ಹಕ್ಕು ಕಾಯ್ದೆಯಂತಹ ಬುಡಕಟ್ಟು ಸಮುದಾಯದ ಹಕ್ಕುಗಳನ್ನು ರಕ್ಷಿಸುವ ಕಾಯ್ದೆಗೆ ಸಮಸ್ಯೆ ಆಗದ ರೀತಿಯಲ್ಲಿ ನಿಯಮಗಳನ್ನು ರೂಪಿಸಲು ಶಿಫಾರಸ್ಸು ಮಾಡಬೇಕು.

ಈಗಾಗಲೇ ಅರಣ್ಯ ಹಕ್ಕು ಕಾಯ್ದೆಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆ 1980 ಕಾಯ್ದೆಯಿಂದ ಸಮಸ್ಯೆ ಇಲ್ಲದೆ ಇದ್ರೂ ಕೂಡ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆ ಮೊಂಡುವಾದ ಮಾಡುತ್ತಾ ಬುಡಕಟ್ಟು ಸಮುದಾಯದ ಹಕ್ಕುಗಳನ್ನು ಮೊಟಕುಗೊಳಿಸುವ ವ್ಯವಸ್ಥಿತ ಷಡ್ಯಂತ್ರ ಮಾಡುತ್ತಿದೆ. ಮುಂದೆ ಪರಿಸರ ಸೂಕ್ಷ್ಮ ವಲಯ ಎಂದು ಹೇಳಿಕೊಂಡು ಅಧಿಕಾರಿಗಳು ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತ ಮಾಡುವುದು ನಿಶ್ಚಿತ. ಆದುದರಿಂದ ಸರ್ಕಾರ ಗ್ರಾಮಸಭೆಗಳ ನಿರ್ಣಯವನ್ನು ಗಂಭೀರವಾಗಿ ಪರಿಗಣಿಸಿ ಅದರ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ವೊಚ್ಚ ನ್ಯಾಯಾಲಯ ಒರಿಸ್ಸಾ ಮೈನಿಂಗ್ ಪ್ರಕರಣದಲ್ಲಿ ಅರಣ್ಯ ಹಕ್ಕು ಗ್ರಾಮ ಸಭೆಗಳ ಮಹತ್ವವನ್ನು ಎತ್ತಿ ಹಿಡಿದಿದೆ. ಅದೆ ಮಾದರಿಯಲ್ಲಿ ಅಧಿಸೂಚನೆ ಹೊರಡಿಸುವ ಮೊದಲು ಗ್ರಾಮಸಭೆಗಳ ನಿರ್ಣಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಲೆಕುಡಿಯ ಸಂಘ ಅಧ್ಯಕ್ಷ ಹರೀಶ್ ಎಳನೀರ್ ತಿಳಿಸಿದ್ದಾರೆ.

Related posts

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya
error: Content is protected !!