28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗ್ನಿಪಥ್ , ಪೊಲೀಸ್, ವಾಚರ್ ಹುದ್ದೆಯ ನಿರೀಕ್ಷೆಯಲ್ಲಿರೋ ಅಭ್ಯರ್ಥಿಗಳಿಗೆ ವಿದ್ಯಾಮಾತಾದಿಂದ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಆಯೋಜನೆ

ಪುತ್ತೂರು: ಸೇನಾ ನೇಮಕಾತಿಗಳು ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಅಗ್ನಿಪಥ್, ಪೊಲೀಸ್ ಕಾನ್ಸ್ಟೇಬಲ್ (PC) ಮತ್ತು ಅರಣ್ಯ ಇಲಾಖೆಯ ವಾಚರ್ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉಚಿತ ದೈಹಿಕ ಸಾಮರ್ಥ್ಯ/ಫಿಟ್ನೆಸ್ ತರಬೇತಿಯನ್ನು ಪ್ರಾರಂಭಿಸಿದ್ದು ,
ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವವರು ಹಾಗೂ ಭವಿಷ್ಯದ ಸಶಸ್ತ್ರ ಪಡೆಗಳ ನೇಮಕಾತಿಗೆ ಸಿದ್ಧರಾಗುತ್ತಿರುವ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.

ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಚಿತ ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಮತ್ತು ಉದ್ಯೋಗ ಆಕಾಂಕ್ಷಿಗಳ ಅನುಕೂಲಕ್ಕಾಗಿ ಪ್ರತಿದಿನ ಬೆಳಿಗ್ಗೆ, ಸಾಯಂಕಾಲ ಅಥವಾ ಪ್ರತಿ ಭಾನುವಾರ ಬೆಳಿಗ್ಗೆ ನುರಿತ ತರಬೇತುದಾರರ ತಂಡದಿಂದ ವಿಶೇಷ ತರಬೇತಿ ನೀಡಲಾಗುತ್ತದೆ. ಬೆಳಿಗ್ಗೆ ತರಬೇತಿ ಮುಗಿಸಿಕೊಂಡು ಕಾಲೇಜಿಗೆ ಅಥವಾ ಉದ್ಯೋಗಕ್ಕೆ ತೆರಳಿ ಸಂಜೆ ಬಂದು ತರಬೇತಿಯಲ್ಲಿ ಪಾಲ್ಗೊಂಡು ವಸತಿ ವ್ಯವಸ್ಥೆಯನ್ನು ಉಪಯೋಗ ಮಾಡಿಕೊಳ್ಳಬಹುದು.

ಸಂಸ್ಥೆಯ ಸಾಧನೆ: ವಿದ್ಯಾಮಾತಾ ಅಕಾಡೆಮಿ ಮೂಲಕ ಕಳೆದ 4 ವರ್ಷಗಳಿಂದ 64ಕ್ಕೂ ಅಧಿಕ ಅಭ್ಯರ್ಥಿಗಳು ಸೇನಾ ಪಡೆ/ ಅರೆಸೇನಾ ಪಡೆ / ಪೊಲೀಸ್ /ಅರಣ್ಯ ನೇಮಕಾತಿಗಳಿಗೆ ಆಯ್ಕೆಯಾಗಿ ಯಶಸ್ಸು ಕಂಡಿದ್ದಾರೆ.


ನೋಂದಣಿ ಮತ್ತು ಸಂಪರ್ಕ ಮಾಹಿತಿ:
ಅರ್ಜಿ ಸಲ್ಲಿಸಿರುವ, ಈಗಾಗಲೇ ಪರೀಕ್ಷೆ ಬರೆದಿರುವ ಅಥವಾ ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿಯ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ಕಚೇರಿ ಮೊಬೈಲ್ ಸಂಖ್ಯೆ 9620468869 ಸಂಪರ್ಕಿಸಬಹುದು.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya
error: Content is protected !!