28 C
ಪುತ್ತೂರು, ಬೆಳ್ತಂಗಡಿ
August 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ನೀರಚಿಲುಮೆ ಬಳಿ ಕೆಎಸ್‌ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹಸವಾರ ಗಾಯ

ಉಜಿರೆ: ಇಲ್ಲಿಯ ನೀರಚಿಲುಮೆ ಬಳಿ ಕೆಎಸ್‌ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಇಂದು (ಆ.11) ಬೆಳಗ್ಗೆ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸನತ್ (30) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಮಡಂತ್ಯಾರು, ಪಾರೆಂಕಿ ಪಾಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಎಂದು ಗುರುತಿಸಲಾಗಿದೆ.

ಬೈಕ್‌ನಲ್ಲಿ ಸಹಸವಾರ ಭರತ್ ಬಳ್ಳಮಂಜ ಇವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya
error: Content is protected !!