28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ “ಎಸ್.ಡಿ.ಎಂ. ನೆನಪಿನಂಗಳ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ, ಹಿರಿಯ ವಿದ್ಯಾರ್ಥಿ ಸಂಘ (ರಿ.), ಉಜಿರೆ ವತಿಯಿಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ “ಎಸ್.ಡಿ.ಎಂ. ನೆನಪಿನಂಗಳ” ವಿದ್ಯಾರ್ಥಿವೇತನ ವಿತರಣೆ, ಮಧ್ಯಾಹ್ನದ ಭೋಜನ ವ್ಯವಸ್ಥೆಗೆ ದೇಣಿಗೆ ಹಸ್ತಾಂತರ, ಹೆಮ್ಮೆಯ ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಆ. 11ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಿತು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೇರಾಜೆ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗುರುನಾಥ್ ಪ್ರಭು, ಕಾರ್ಯದರ್ಶಿ ಬಿಕೆ ಧನಂಜಯ್ ರಾವ್ ಹಾಗೂ ಸನ್ಮಾನ ಸ್ವೀಕರಿಸಿದ ವೈದ್ಯರುಗಳಾದ ಡಾ| ಪ್ರಕಾಶ್ ಬಿ. ಶಕ್ತಿ ಕ್ಲಿನಿಕ್ ಉಜಿರೆ, ಡಾ| ರಾಜಾರಾಮ ಕೆ. ಬಿ. ಗಿರಿಜಾ ಡೆಂಟಲ್ ಕ್ಲಿನಿಕ್ ಉಪ್ಪಿನಂಗಡಿ, ಡಾ| ಎಂ. ಎಂ. ದಯಾಕರ್ ಶ್ರೀ ದಂತ ಚಿಕಿತ್ಸಾಲಯ ಉಜಿರೆ, ಡಾ| ಸದಾನಂದ ಪೂಜಾರಿ ಸೀನಿಯರ್ ಯೂರಾಲಾಜಿಸ್ಟ್ ಮಂಗಳೂರು, ಡಾ| ಶ್ರೀಹರಿ ಅಭಯ ಹಾಸ್ಪಿಟಲ್ ಗುರುವಾಯನಕೆರೆ, ಡಾ| ಪ್ರದೀಪ್ ಆಟಿಕುಕ್ಕೆ ಆರೋಗ್ಯ ಕ್ಲಿನಿಕ್ ನಾವೂರ, ಡಾ। ಶಶಿಕಾಂತ ಡೋಂಗ್ರೆ ಗಣೇಶ್ ಮೆಡಿಕಲ್ ಕೇರ್ ಬೆಳ್ತಂಗಡಿ, ಡಾ| ರಂಜನ್ ಕುಮಾರ್ ಇ.ಎನ್.ಟಿ. ಸ್ಪೆಷಲಿಸ್ಟ್ ಉಜಿರೆ, ಡಾ| ರೇಷ್ಠಾ ಸುನಾ ಡೆಂಟಲ್ ಕೇರ್ ಮೂಡುಬಿದಿರೆ, ಡಾ| ಶ್ರೀಹರ್ಷ ವಿನ್ಯಾಸ ದಂತ ಚಿಕಿತ್ಸಾಲಯ ಉಜಿರೆ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ ನಡೆದ ಬಳಿಕ ಅರ್ಹ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಮಧ್ಯಾಹ್ನದ ಭೋಜನ ವ್ಯವಸ್ಥೆಗೆ ದೇಣಿಗೆ ಚೆಕ್ ಹಸ್ತಾಂತರ ನಡೆಯಿತು.
ಶ್ರೀ ಧ.ಮಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಸ್ವಾಗತಿಸಿದರು. ಡಾ. ದಿವಾಕರ ಕೆ ಹಾಗೂ ದೀಕ್ಷಿತ್ ರೈ ಕಾರ್ಯಕ್ರಮ ನಿರೂಪಿಸಿದರು. ರೋ. ಬಿಕೆ ಧನಂಜಯ್ ರಾವ್ ವಂದಿಸಿದರು.

Related posts

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya
error: Content is protected !!