28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜನರ ಹಕ್ಕುಗಳನ್ನು ಖಾತ್ರಿ ಪಡಿಸದೆ ಭೌತಿಕ ಸರ್ವೆ ಮಾಡದೆ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆ: ಹರೀಶ್ ಎಳನೀರ್

ಬೆಳ್ತಂಗಡಿ: ಸರ್ಕಾರಗಳು ನೀತಿಯನ್ನು ರೂಪಿಸುವ ಮೊದಲು ಜನ ಸಮೂಹದ ಜೊತೆ ಸಂವಾದಗಳನ್ನು ಮಾಡಬೇಕು ವಾಸ್ತವ ಸ್ಥಿತಿಯನ್ನು ಅರಿತು ಕಾನೂನುಗಳನ್ನು ಜಾರಿಗೆ ತರಬೇಕೆ ಹೊರತು. ಸರ್ವಾಧಿಕಾರದ ರೀತಿಯಲ್ಲಿ ವರ್ತನೆ ಮಾಡುವುದು ಸಮಂಜಸವಲ್ಲ. ಜನಪ್ರತಿನಿಧಿಗಳು ವಿಶೇಷವಾಗಿ ಶಾಸಕರು ಸಂಸದರು ಈ ಬಗ್ಗೆ ವಸ್ತುನಿಷ್ಠವಾಗಿ ಕಾನೂನಿನ ಮಜಲುಗಳನ್ನು ಅಧ್ಯಯನ ಮಾಡಿ ಧ್ವನಿಯೆತ್ತಬೇಕು. ರಾಜ್ಯ ಸರ್ಕಾರ ಯಾವ ಜನವಸತಿ ಪ್ರದೇಶಗಳನ್ನು ಬಿಟ್ಟು ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡಬೇಕು. ಜನರ ಹಕ್ಕುಗಳು ವಿಶೇಷವಾಗಿ ಅರಣ್ಯ ಹಕ್ಕು ಕಾಯ್ದೆಯಂತಹ ಬುಡಕಟ್ಟು ಸಮುದಾಯದ ಹಕ್ಕುಗಳನ್ನು ರಕ್ಷಿಸುವ ಕಾಯ್ದೆಗೆ ಸಮಸ್ಯೆ ಆಗದ ರೀತಿಯಲ್ಲಿ ನಿಯಮಗಳನ್ನು ರೂಪಿಸಲು ಶಿಫಾರಸ್ಸು ಮಾಡಬೇಕು.

ಈಗಾಗಲೇ ಅರಣ್ಯ ಹಕ್ಕು ಕಾಯ್ದೆಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆ 1980 ಕಾಯ್ದೆಯಿಂದ ಸಮಸ್ಯೆ ಇಲ್ಲದೆ ಇದ್ರೂ ಕೂಡ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆ ಮೊಂಡುವಾದ ಮಾಡುತ್ತಾ ಬುಡಕಟ್ಟು ಸಮುದಾಯದ ಹಕ್ಕುಗಳನ್ನು ಮೊಟಕುಗೊಳಿಸುವ ವ್ಯವಸ್ಥಿತ ಷಡ್ಯಂತ್ರ ಮಾಡುತ್ತಿದೆ. ಮುಂದೆ ಪರಿಸರ ಸೂಕ್ಷ್ಮ ವಲಯ ಎಂದು ಹೇಳಿಕೊಂಡು ಅಧಿಕಾರಿಗಳು ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತ ಮಾಡುವುದು ನಿಶ್ಚಿತ. ಆದುದರಿಂದ ಸರ್ಕಾರ ಗ್ರಾಮಸಭೆಗಳ ನಿರ್ಣಯವನ್ನು ಗಂಭೀರವಾಗಿ ಪರಿಗಣಿಸಿ ಅದರ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ವೊಚ್ಚ ನ್ಯಾಯಾಲಯ ಒರಿಸ್ಸಾ ಮೈನಿಂಗ್ ಪ್ರಕರಣದಲ್ಲಿ ಅರಣ್ಯ ಹಕ್ಕು ಗ್ರಾಮ ಸಭೆಗಳ ಮಹತ್ವವನ್ನು ಎತ್ತಿ ಹಿಡಿದಿದೆ. ಅದೆ ಮಾದರಿಯಲ್ಲಿ ಅಧಿಸೂಚನೆ ಹೊರಡಿಸುವ ಮೊದಲು ಗ್ರಾಮಸಭೆಗಳ ನಿರ್ಣಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಲೆಕುಡಿಯ ಸಂಘ ಅಧ್ಯಕ್ಷ ಹರೀಶ್ ಎಳನೀರ್ ತಿಳಿಸಿದ್ದಾರೆ.

Related posts

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!