28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಶಾಲೆಗೆ ಆಗಮಿಸಿದ್ದರು. ಆಟಿ ತಿಂಗಳ ವಿಶೇಷವಾದ ತಿಂಡಿ-ತಿನಿಸುಗಳನ್ನು ಮನೆಯಿಂದ ತಯಾರಿಸಿಕೊಂಡು ಬಂದು, ಅವುಗಳ ಮಹತ್ವ ಹಾಗೂ ವಿಶೇಷತೆಯನ್ನು ಪರಸ್ಪರ ಹಂಚಿಕೊಂಡರು. ಈ ಮೂಲಕ ವಿದ್ಯಾರ್ಥಿಗಳಿಗೆ ಆಟಿ ತಿಂಗಳ ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಅದರ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.

ನೃತ್ಯ, ಅಭಿನಯ, ಗಾದೆ ಮಾತುಗಳು ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆಟಿ ತಿಂಗಳ ವಿಶೇಷತೆಗಳನ್ನು ಮಕ್ಕಳಿಗೆ ಪರಿಚಯಿಸಲಾಯಿತು. ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ಜನರು ಯಾವ ರೀತಿಯ ಜೀವನ ನಡೆಸುತ್ತಿದ್ದರು, ಅವರ ಆಹಾರ ಪದ್ಧತಿ ಹಾಗೂ ಜೀವನಶೈಲಿ ಹೇಗಿತ್ತು ಎಂಬುದರ ಬಗ್ಗೆಯೂ ಮಕ್ಕಳಿಗೆ ಮಾಹಿತಿಯನ್ನು ನೀಡಲಾಯಿತು.

ಶಾಲೆಯ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅಗತ್ಯ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya
error: Content is protected !!