28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಬದಿನಡೆ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ, ಗರ್ಭಗುಡಿಯಲ್ಲಿ ನಾಗದೇವರ ಪ್ರತ್ಯಕ್ಷ

ಮೇಲಂತಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟಿನ “ಕೀರ್ತಿ” ಪ್ರಬುದ್ಧ ಜ್ಞಾನವಿಕಾಸ ಕೇಂದ್ರದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವನ್ನು ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪೂರ್ಣ ಆವರಣವನ್ನು ಸ್ವಚ್ಛಗೊಳಿಸುವ ಮೂಲಕವಾಗಿ ನಡೆಸಲಾಯಿತು.

ಈ ಸಂದರ್ಭ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೈಲೇಶ್ ಕುರ್ತೋಡಿ, ಮೇಲ್ವಿಚಾರಕರಾದ ರಾಮ್ ಕುಮಾರ್, ಸೇವಾಪ್ರತಿನಿಧಿ ಲೀಲಾವತಿ, ಸದಸ್ಯರಾದ ನಿತಾ, ಅಶ್ವಿನಿ, ನಳಿನಿ, ವಿಜಯ, ಅಪ್ಪಿ, ಸುಶೀಲ, ವಿಧ್ಯಾ, ಶಶಿಕಲಾ, ಸೀತಾ ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ನಾಗದೇವರ ಪ್ರತ್ಯಕ್ಷ: ನಾಗಬ್ರಹ್ಮ ದೇವಸ್ಥಾನದ ಗರ್ಭಗುಡಿಯ ಒಳಭಾಗದಲ್ಲಿರುವ ಹುತ್ತದಿಂದ ಹೊರಬಂದ ನಾಗದೇವರು ಸ್ವಚ್ಛತಾ ಕಾರ್ಯದಲ್ಲಿ ಉಪಸ್ಥಿತರಿದ್ದ ಸದಸ್ಯರಿಗೆ ಪ್ರತ್ಯಕ್ಷ ದರ್ಶನ ನೀಡಿದೆ.

Related posts

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!