28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಜಯರಾಮ ನೆಲ್ಲಿತ್ತಾಯ ರವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆನೆ ಹಾವಳಿ ಮಿತಿ ಮೀರುತ್ತಿದ್ದು, ಕೃಷಿ ಬೆಳೆಗಳಿಗೆ ವ್ಯಾಪಕ ಹಾನಿಯಾಗುವುದರ ಜೊತೆಗೆ ಗ್ರಾಮೀಣ ಪ್ರದೇಶದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಪರಿಸರ ಕಾರ್ಯಕರ್ತ ಬಿ. ಜಯರಾಮ ನೆಲ್ಲಿತ್ತಾಯ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಆನೆಗಳ ಸಂಚಾರದಿಂದ ರಾತ್ರಿ ವೇಳೆ ವಾಹನಗಳ ಓಡಾಟಕ್ಕೂ ತೊಂದರೆಯಾಗುತ್ತಿದ್ದು, ಪ್ರಯಾಣಿಕರು ಆತಂಕದಿಂದ ಸಂಚರಿಸುವಂತಾಗಿದೆ. ಹಲವೆಡೆ ಕಾಡಂಚಿನ ಗ್ರಾಮಗಳಲ್ಲಿ ಜನಸಾಮಾನ್ಯರು ರಾತ್ರಿ ಹಾಗೂ ಮುಂಜಾನೆ ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಾಡಿನಂಚಿನಲ್ಲಿ ವಾಸಿಸುವ ಕುಟುಂಬಗಳು ವಿದ್ಯುತ್ ಬೆಳಕಿನ ವ್ಯವಸ್ಥೆಯ ಕೊರತೆಯಿಂದಾಗಿ ರಾತ್ರಿ ಸಮಯದಲ್ಲಿ ಭಯದಲ್ಲೇ ದಿನ ಕಳೆಯುವಂತಾಗಿದೆ. ವಿದ್ಯಾರ್ಥಿಗಳು ಕೂಡ ಆನೆಗಳ ಭೀತಿಯಿಂದ ಪ್ರತಿನಿತ್ಯ ಶಾಲೆಗೆ ತೆರಳಲು ಆತಂಕಪಡುವ ಪರಿಸ್ಥಿತಿ ಎದುರಾಗಿದೆ. ಆನೆಗಳ ಹಾವಳಿಯಿಂದ ಕೃಷಿ ಬೆಳೆಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಆನೆ ಹಾವಳಿಯ ತೀವ್ರತೆ ಹೆಚ್ಚಾಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು, ಆನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಹಾಗೂ ಪರಿಣಾಮಕಾರಿ ಪರಿಹಾರ ರೂಪಿಸಬೇಕು ಎಂದು ಬಿ. ಜಯರಾಮ ನೆಲ್ಲಿತ್ತಾಯ ಆಗ್ರಹಿಸಿದ್ದಾರೆ.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಗ್ರಾಮೀಣ ಜನರಿಗೆ ಬ್ಯಾಂಕಿಂಗ್ ಸೇವೆ ತಲುಪಿಸಿದ ಯಶೋಗಾಧೆ

Suddi Udaya
error: Content is protected !!