ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವ ಸೆ 4 ರಂದು ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅ 8 ರಂದು ಶ್ರೀರಾಮ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ, ಕೋಶಾಧಿಕಾರಿ ಪವನ್ ಪೂಜಾರಿ ಪಯ್ಯೋಟ್ಟು, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರoಗದಳ ಮದ್ದಡ್ಕ ಸoಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಮದ್ದಡ್ಕ ತಾಯಿ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮoದಿರದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.













