28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಬದಿನಡೆ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ, ಗರ್ಭಗುಡಿಯಲ್ಲಿ ನಾಗದೇವರ ಪ್ರತ್ಯಕ್ಷ

ಮೇಲಂತಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟಿನ “ಕೀರ್ತಿ” ಪ್ರಬುದ್ಧ ಜ್ಞಾನವಿಕಾಸ ಕೇಂದ್ರದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವನ್ನು ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪೂರ್ಣ ಆವರಣವನ್ನು ಸ್ವಚ್ಛಗೊಳಿಸುವ ಮೂಲಕವಾಗಿ ನಡೆಸಲಾಯಿತು.

ಈ ಸಂದರ್ಭ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೈಲೇಶ್ ಕುರ್ತೋಡಿ, ಮೇಲ್ವಿಚಾರಕರಾದ ರಾಮ್ ಕುಮಾರ್, ಸೇವಾಪ್ರತಿನಿಧಿ ಲೀಲಾವತಿ, ಸದಸ್ಯರಾದ ನಿತಾ, ಅಶ್ವಿನಿ, ನಳಿನಿ, ವಿಜಯ, ಅಪ್ಪಿ, ಸುಶೀಲ, ವಿಧ್ಯಾ, ಶಶಿಕಲಾ, ಸೀತಾ ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ನಾಗದೇವರ ಪ್ರತ್ಯಕ್ಷ: ನಾಗಬ್ರಹ್ಮ ದೇವಸ್ಥಾನದ ಗರ್ಭಗುಡಿಯ ಒಳಭಾಗದಲ್ಲಿರುವ ಹುತ್ತದಿಂದ ಹೊರಬಂದ ನಾಗದೇವರು ಸ್ವಚ್ಛತಾ ಕಾರ್ಯದಲ್ಲಿ ಉಪಸ್ಥಿತರಿದ್ದ ಸದಸ್ಯರಿಗೆ ಪ್ರತ್ಯಕ್ಷ ದರ್ಶನ ನೀಡಿದೆ.

Related posts

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!