ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ಪ್ರತಿಷ್ಠಿತ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ.
ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ ಯುವರಾಜ್ ಜೈನ್ ಅವರ ಅವಿರತ ಕೊಡುಗೆಗೆ ಸಂದ ಮತ್ತೊಂದು ಮನ್ನಣೆಯಾಗಿದೆ. ಸೆ. 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆದ್ರದ ಕೃಷ್ಣೋತ್ಸವದ ವಿವಿಧ ಸ್ಪರ್ಧೆಗಳ ಉದ್ಘಾಟನೆ, ಸಭಾ ಕಾರ್ಯಕ್ರಮ ಹಾಗೂ ‘ಅಷ್ಟಮಿದ ಪಿಲಿಗೊಬ್ಬು’ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ.
ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಯುವರಾಜ್ ಜೈನ್ ಅವರು ಸಲ್ಲಿಸಿದ ಅನನ್ಯ ಸೇವೆಗಾಗಿ ಈ ಹಿಂದೆಯೂ ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ.













