25.6 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವೇಣೂರು ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಪ್ರಾಥಮಿಕ ಬಾಲಕಿಯರ 14 ವರ್ಷದೊಳಗಿನ (U -14) ವಿಭಾಗದಲ್ಲಿ ಆಧ್ಯಾ. ಹೆಚ್, ನಿರ್ವಿ, ಚಾರ್ವಿ, ಶ್ರೀರಾಧ್ಯ ಅವರನ್ನೊಳಗಂಡ ತಂಡವು ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಹಾಗೂ ಆಧ್ಯಾ,ಎಚ್ ಉತ್ತಮ ಆಟಗಾರ್ತಿ ಪ್ರಶಸ್ತಿ ಪಡೆದು ಅದೇ ರೀತಿ ಬಾಲಕರ 17 ವರ್ಷದೊಳಗಿನ (U -17) ವಿಭಾಗದಲ್ಲಿ ಶ್ರವನ್ ರಾಜ್, ಆಧಿತ್ಯ, ಹನೀನ್, ಸುಹೇಲ್ ಅವರನ್ನೊಳಗೊಂಡ ತಂಡವು ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಹಾಗೂ ಶ್ರವನ್ ರಾಜ್ ಉತ್ತಮ ಆಟಗಾರ ಪ್ರಶಸ್ತಿ ಪಡೆದು ಪ್ರಾರ್ಥಮಿಕ ವಿಭಾಗದ ಬಾಲಕಿಯರು ಮತ್ತು ಪ್ರೌಢ ಶಾಲೆ ವಿಭಾಗದ ಬಾಲಕರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯಿನಿ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya
error: Content is protected !!