29 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ 13: ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

ಬೆಳ್ತಂಗಡಿ: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರ ಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್ ಮೂಲಕ ಆ 13ರಂದು ಸಂಜೆ 6.15 7:30 ರವರೆಗೆ ನಡೆಯಲಿದೆ ಎಂದು ಮುಳಿಯ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಷಕರು ಮತ್ತು ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ನಟ, ಚಿಂತಕ ಹಾಗೂ ಪ್ರೇರಣಾದಾಯಕ ಮಾತುಗಾರ ರಮೇಶ್ ಅರವಿಂದ್ ಅವರು ಭಾಗವಹಿಸಿ, ಮಕ್ಕಳ ಬೆಳವಣಿಗೆ, ಪೋಷಕರ ಜವಾಬ್ದಾರಿ ಹಾಗೂ ಮಕ್ಕಳೊಂದಿಗೆ ಸಕಾರಾತ್ಮಕ ಸಂಬಂಧ ಬೆಳೆಸುವ ಕುರಿತು ಉಪಯುಕ್ತ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು ಮುಂಗಡವಾಗಿ ನೋಂದಾಯಿಸಿಕೊಳ್ಳಬಹುದು. ನೋಂದಣಿಗಾಗಿ ಕೆಳಗಿನ Zoom ಲಿಂಕ್ ಬಳಸಬಹುದು:
https://us06web.zoom.us/meeting/register/9zA1g1FaT2mZ_JB1DzfCgg

ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ತಮ್ಮ ಹೆಸರು ಹಾಗೂ ಇತರ ಅಗತ್ಯ ಮಾಹಿತಿಯೊಂದಿಗೆ 8123643916 ಸಂಖ್ಯೆಗೆ WhatsApp ಮೂಲಕ ಕಳುಹಿಸಬಹುದು.

ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಮುಳಿಯ ಜ್ಯುವೆಲ್ಸ್‌ನ ಅಧಿಕೃತ YouTube ಚಾನೆಲ್‌ನಲ್ಲಿಯೂ ಅವಕಾಶ ಕಲ್ಪಿಸಲಾಗಿದೆ: YouTube:
https://www.youtube.com/@muliyajewels/streams

Related posts

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya
error: Content is protected !!