ತಣ್ಣೀರುಪಂತ : ಸುಗಮ ಸಂಜೀವಿನಿ ಮಹಿಳಾ ಒಕ್ಕೂಟ ತಣ್ಣೀರುಪಂತ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಪೂಜಿ ಸಭಾಭವನ ತಣ್ಣೀರುಪಂತದಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಮತ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ಜಯಾನಂದ ಕಲ್ಲ್ಲಾಪು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಾದ ಶ್ರೀಮತಿ ಸುಮಯ್ಯ ಹೆಚ್, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಶಶಿಧರ್ ಮತ್ತು ಬೆಳ್ತಂಗಡಿ ತಾಲೂಕು NRLM ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ತಣ್ಣೀರುಪಂತ ಪಂಚಾಯತ್ ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಸಿಬ್ಬಂದಿಗಳು, ತಣ್ಣೀರುಪಂಥ ಗ್ರಾಮ ಪಂಚಾಯತಿನ ಸಿಬ್ಬಂದಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಆಟಿಡೊಂಜಿ ದಿನ ಕಾರ್ಯಕ್ರಮದ ಕುರಿತು ಮುಖ್ಯ ಭಾಷಣಕಾರರಾಗಿ ದೈವ ನರ್ತಕರಾದ ಮೋನಪ್ಪ ಕಲ್ಲಾಪುರವರು ತಮ್ಮ ಹಿತ ನುಡಿಗಳನ್ನು ಸಭೆಗೆ ತಿಳಿಸಿದರು. ಹಾಗೆ ಈ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ವಿವಿಧ ಖಾದ್ಯಗಳ ರುಚಿಯನ್ನು ಸವಿದರು.. ಕಾರ್ಯಕ್ರಮದಲ್ಲಿ ಚೆನ್ನ ಮಣಿ, ಹಗ್ಗ ಜಗ್ಗಾಟ ಮತ್ತು ಹಾಳೆ ಇಳಿಯುವುದು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು . ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ತನ್ಯಪಾನ ಮತ್ತು ಅಂಗಾಂಗ ದಾನದ ಬಗ್ಗೆ ಮಾಹಿತಿಯನ್ನು ಬೆಳ್ತಂಗಡಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಪುಷ್ಪ ಮತ್ತು ಪದ್ಮಾವತಿ ಕುಟುಂಬ ಕಲ್ಯಾಣ ಇಲಾಖೆ ಸಂಯೋಜಕರು ಮಂಗಳೂರು ನೀಡಿದರು.
ಒಕ್ಕೂಟದ ಸಿಬ್ಬಂದಿಗಳ ಪ್ರಾರ್ಥಿಸಿದರು. ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು. ಎಮ್.ಬಿ.ಕೆ ಸೌಮ್ಯಶ್ರೀ ಅತಿಥಿಗಳನ್ನು ಸ್ವಾಗತಿಸಿದರು. ಕೃಷಿ ಸಖಿ ಶೋಭಾ ರವರ ಧನ್ಯವಾದವಿತ್ತರು.













