29 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.11 ರಂದು ಆಟಿದ ಲೇಸು ಕಾರ್ಯಕ್ರಮ ಜರಗಿತು.

ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಪಿ ಶೆಟ್ಟಿ ಉದ್ಘಾಟಿಸಿ,ಈ ಕಾರ್ಯಕ್ರಮದಿಂದ ಹಿಂದಿನ ಕೃಷಿ, ಆಹಾರ, ಸಂಸ್ಕೃತಿಯ ಅರಿವು ಮೂಡುತ್ತದೆ , ಮನೆಯ ಹಿರಿಯರು ಗ್ರಂಥಾಲಯವಿದ್ದಂತೆ ಅವರ ಜ್ಞಾನ ಪಡೆದುಕೊಂಡು ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆ ಮುಂದುವರಿಸಿಕೊಂಡು ಹೋಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ರವೀಂದ್ರ ಶೆಟ್ಟಿ ಬಳಂಜ ಮಾತನಾಡಿ ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಒಳ್ಳೆಯ ಕಾರ್ಯಕ್ರಮ ಇದಾಗಿದೆ ತುಳು ಭಾಷೆ ಮಾತನಾಡುವವರು ಮೃದು ಸ್ವಭಾದವರಾಗಿದ್ದು,ಇಲ್ಲಿನ ಅಹಾರ,ಸಂಸ್ಕೃತಿ ವಿಶಿಷ್ಟವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಮಾತನಾಡಿ ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಪಾಲಿಸಿಕೊಂಡು ಬರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಸಂಯೋಜಕರಾದ ರವಿಚಂದ್ರ ಜೈನ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ವಿದ್ಯಾರ್ಥಿಗಳಾದ ಸೃಜನ್ಯ ಆಟಿ ತಿಂಗಳ ವಿಶೇಷತೆ, ಚರಣ್ ಎದುರು ಕತೆ,ನಿಕ್ಷಿತ್ ಹಳ್ಳಿ ಮದ್ದು,ಕಾರ್ತಿಕ್ ತುಳುನಾಡ ಹಬ್ಬಗಳ ಕುರಿತು ಮಾತನಾಡಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ತುಳುನಾಡಿನ ಹಳೆಯ ವಸ್ತುಗಳ ಮತ್ತು ತುಳು ನಾಡಿಗೆ ಸಂಬಂಧಿಸಿದ ಪುಸ್ತಕಗಳನ್ನು ಪ್ರದರ್ಶಿಸಲಾಯಿತು.

ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿಯಾರಾದ ವಾರಿಜ ಎಸ್.ಗೌಡ , ರಾಜಶ್ರೀ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಮೀಳಾ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು‌. ದೀಪಿಕಾ ಸ್ವಾಗತಿಸಿ, ಆತ್ಮಿ ವಂದಿಸಿದರು. ಸುಷ್ಮಾ ಮತ್ತು ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya
error: Content is protected !!