ವೇಣೂರು : ಯುವವಾಹಿನಿ ವೇಣೂರು ಘಟಕ “ಆಸರೆ” ಯೋಜನೆಯ ಸಹಾಯಹಸ್ತ ಕಾರ್ಯಕ್ರಮವನ್ನು ಗುಂಡೂರಿ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿ ನಿಕ್ಷಿತ್ ಗುಂಡೂರಿರವರಿಗೆ ಶೈಕ್ಷಣಿಕ ನೆರವು ಘಟಕದ ವತಿಯಿಂದ ವಿತರಣೆಯನ್ನು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಕಾರ್ಯದರ್ಶಿ ದಕ್ಷಾ ಎ ಅಂಬಲ ಅಂಡಿಂಜೆ, ಕೋಶಾಧಿಕಾರಿ ಸತೀಶ್ ಚಿಗುರು, ಉಪಾಧ್ಯಕ್ಷ ಸತೀಶ್ ಉಜಿರ್ದಡ್ಡ, ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ನಿತೀಶ್ ಹೆಚ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಮಾಜಿ ಅಧ್ಯಕ್ಷರಾದ ನವೀನ್ ಕುಮಾರ್ ಪಚ್ಚೇರಿ, ಅರುಣ್ ಕುಮಾರ್ ಮೂಡುಕೋಡಿ, ಕ್ರೀಡಾ ನಿರ್ದೇಶಕರಾದ ಸಂತೋಷ್ ಕುಮಾರ್ ಮಂಜಲೋಕ್ಕು, ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕೋಟ್ಯಾನ್ ನಾರಾವಿ, ಮಹಿಳಾ ನಿರ್ದೇಶಕರಾದ ಗುಣವತಿ ಡಿ ಕುಕ್ಕೇಡಿ ಉಪಸ್ಥಿತರಿದ್ದರು.













