29 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ 13: ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

ಬೆಳ್ತಂಗಡಿ: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರ ಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್ ಮೂಲಕ ಆ 13ರಂದು ಸಂಜೆ 6.15 7:30 ರವರೆಗೆ ನಡೆಯಲಿದೆ ಎಂದು ಮುಳಿಯ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಷಕರು ಮತ್ತು ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ನಟ, ಚಿಂತಕ ಹಾಗೂ ಪ್ರೇರಣಾದಾಯಕ ಮಾತುಗಾರ ರಮೇಶ್ ಅರವಿಂದ್ ಅವರು ಭಾಗವಹಿಸಿ, ಮಕ್ಕಳ ಬೆಳವಣಿಗೆ, ಪೋಷಕರ ಜವಾಬ್ದಾರಿ ಹಾಗೂ ಮಕ್ಕಳೊಂದಿಗೆ ಸಕಾರಾತ್ಮಕ ಸಂಬಂಧ ಬೆಳೆಸುವ ಕುರಿತು ಉಪಯುಕ್ತ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು ಮುಂಗಡವಾಗಿ ನೋಂದಾಯಿಸಿಕೊಳ್ಳಬಹುದು. ನೋಂದಣಿಗಾಗಿ ಕೆಳಗಿನ Zoom ಲಿಂಕ್ ಬಳಸಬಹುದು:
https://us06web.zoom.us/meeting/register/9zA1g1FaT2mZ_JB1DzfCgg

ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ತಮ್ಮ ಹೆಸರು ಹಾಗೂ ಇತರ ಅಗತ್ಯ ಮಾಹಿತಿಯೊಂದಿಗೆ 8123643916 ಸಂಖ್ಯೆಗೆ WhatsApp ಮೂಲಕ ಕಳುಹಿಸಬಹುದು.

ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಮುಳಿಯ ಜ್ಯುವೆಲ್ಸ್‌ನ ಅಧಿಕೃತ YouTube ಚಾನೆಲ್‌ನಲ್ಲಿಯೂ ಅವಕಾಶ ಕಲ್ಪಿಸಲಾಗಿದೆ: YouTube:
https://www.youtube.com/@muliyajewels/streams

Related posts

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya
error: Content is protected !!