25.6 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ಪ್ರತಿಷ್ಠಿತ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ.

ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ ಯುವರಾಜ್ ಜೈನ್ ಅವರ ಅವಿರತ ಕೊಡುಗೆಗೆ ಸಂದ ಮತ್ತೊಂದು ಮನ್ನಣೆಯಾಗಿದೆ. ಸೆ. 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆದ್ರದ ಕೃಷ್ಣೋತ್ಸವದ ವಿವಿಧ ಸ್ಪರ್ಧೆಗಳ ಉದ್ಘಾಟನೆ, ಸಭಾ ಕಾರ್ಯಕ್ರಮ ಹಾಗೂ ‘ಅಷ್ಟಮಿದ ಪಿಲಿಗೊಬ್ಬು’ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ.

ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಯುವರಾಜ್ ಜೈನ್ ಅವರು ಸಲ್ಲಿಸಿದ ಅನನ್ಯ ಸೇವೆಗಾಗಿ ಈ ಹಿಂದೆಯೂ ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!