24.7 C
ಪುತ್ತೂರು, ಬೆಳ್ತಂಗಡಿ
August 14, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.

ಪುಂಜಾಲಕಟ್ಟೆ ಠಾಣಾ ಅಕ್ರ: 98/2019, ಕಲಂ 27(b) NDPS ಕಾಯ್ದೆ ಹಾಗೂ ಬಂಟ್ವಾಳದ ಮಾನ್ಯ ಹಿರಿಯ ನ್ಯಾಯಾಲಯದ ಸಿಸಿ ನಂ. 08/2020 ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಸಂತೆ ಮಾರ್ಕೆಟ್ ರೋಡ್ ನಿವಾಸಿ ರಿಜ್ವಾನ್ ಮಗ ಎಂ.ಡಿ. ಸೈಫ್ ಅಲಿಯಾಸ್ ಮೊಹಮ್ಮದ್ ಸೈಫ್ (32) ಎಂಬಾತನನ್ನು ಆ.13ರಂದು ಕೇರಳ ರಾಜ್ಯದ ಮಂಜೇಶ್ವರದ ಕಡಂಬಾರು ಎಂಬಲ್ಲಿಂದ ಪುಂಜಾಲಕಟ್ಟೆ ಪೊಲೀಸರು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಸಂಜೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 10 ಸಾವಿರ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ಮಾರ್ಗದರ್ಶನದಲ್ಲಿ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಶ್ ಕೆ.ವಿ ನೇತೃತ್ವದ ಸಿಬ್ಬಂದಿ ಹೆಚ್‌ಸಿ ರಾಜೇಶ್, ಪಿಸಿ ಚೋಳಪ್ಪ ಸಂಶಿ, ಪಿಸಿ ನಾಗರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya
error: Content is protected !!