27.7 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಮಾಂಡೋವಿ ಮೋಟಾರ್ಸ್‌ನಲ್ಲಿ ನ್ಯೂ ಬ್ರೆಝಾ ಕಾರು ಬಿಡುಗಡೆ

ಬೆಳ್ತಂಗಡಿ: ಹಲವು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವ ಮಾಂಡೋವಿ ಮೋಟಾರ್ಸ್ ಸಂಸ್ಥೆಯ ಕಕ್ಕಿಂಜೆ ಶೋರೂಮ್‌ನಲ್ಲಿ ನೂತನ ಬ್ರೆಝಾ ಕಾರನ್ನು ಆ.11ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು.

ಕಾರಿನ ಬಿಡುಗಡೆ ಬಳಿಕ ನೂತನ ಬ್ರೆಝಾದಲ್ಲಿ ಅಳವಡಿಸಲಾಗಿರುವ ಆಧುನಿಕ ತಂತ್ರಜ್ಞಾನ, ಸಾಮರ್ಥ್ಯ, ರಸ್ತೆ ಸುರಕ್ಷತಾ ವೈಶಿಷ್ಟ್ಯಗಳು ಸೇರಿದಂತೆ ವಿವಿಧ ವಿಶೇಷತೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಾಂಡೋವಿ ಮೋಟಾರ್ಸ್ ಸೇಲ್ಸ್ ವಿಭಾಗದ ಜಿಎಂ ಶಶಿಧರ ಕಾರಂತ್, ಎಸ್‌ಸಿಡಿಸಿಸಿ ಬ್ಯಾಂಕ್ ಮ್ಯಾನೇಜರ್ ವಿವೇಕ್ ಜೈನ್, ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ. ಕೋಟ್ಯಾನ್, ವಿ& ವಿ ಸಂಸ್ಥೆಯ ಮುಖ್ಯಸ್ಥರಾದ ಬಾಬುರಾಜ್, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ರಾಜೇಶ್, ಉಪನ್ಯಾಸಕ ಜೋಸೆಫ್ ಸೇರಿದಂತೆ ಹಲವರು ಉಪಸ್ಥಿತರಿದ್ದು ಸಂಸ್ಥೆಯ ಸೇವೆ ಹಾಗೂ ನೂತನ ಕಾರಿನ ಕುರಿತು ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದರು.

ನೂತನ ಬ್ರೆಝಾ ಕಾರಿನ ಕೀಲಿಯನ್ನು ಮಹಮ್ಮದ್ ಸಫಾನ್, ಶಾಜಿ ಜೋಸೆಫ್ ಹಾಗೂ ಹಾರಿಸ್ ಅವರಿಗೆ ಹಸ್ತಾಂತರಿಸಲಾಯಿತು.

ಸಹಾಯಕ ಸೇಲ್ಸ್ ಮ್ಯಾನೇಜರ್ ಸುಜಿತ್ ಸ್ವಾಗತಿಸಿದರು. ಟೀಮ್ ಮ್ಯಾನೇಜರ್ ಚರಣ್ ಕುಮಾರ್ ವಂದಿಸಿದರು. ನವೀನ್ ಕುಮಾರ್, ಸಾಬು ಜೋಸೆಫ್, ಡೇಸಿಕ್, ಬಾಷಾ, ಲತೇಶ್ ಬಳಂಜ ಹಾಗೂ ಇನ್ನಿತರರು ಸಹಕರಿಸಿದರು.

Related posts

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎನ್.ಎಸ್.ಎಸ್ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!