28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಸದಸ್ಯರಿಗೆ ಶೇ. 9 ಡಿವಿಡೆಂಟ್

ಗೇರುಕಟ್ಟೆ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.13ರಂದು ಸಂಘ ವಠರಾದಲ್ಲಿ ನಡೆಯಿತು.

ಸರಕಾರದ ಯೋಜನೆಗಳ ಬಗ್ಗೆ ಹಾಗೂ ಹೈನುಗಾರಿಕೆಯಲ್ಲಿ ಉತ್ತಮ ಗುಣಮಟ್ಟದ ಹಾಲು ಸಂಗ್ರಹಿಸಿ ಮತ್ತು ಹೆಚ್ಚಿನ ಲಾಭ ಪಡೆಯುವ ಬಗ್ಗೆ ಮಾಹಿತಿಯನ್ನು ದ.ಕ.ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಪಿ.ಕಾಮತ್ ಸಂಘದ ಸದಸ್ಯರಿಗೆ ಮಾಹಿತಿ ನೀಡಿ,ಸಂಘದ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಜನಾರ್ಧನ ಗೌಡ ಕೆ.ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡುತ್ತಾ ನಮ್ಮ ಸಂಘದ ಸದಸ್ಯರು ಗುಣಮಟ್ಟದ ಹಾಲು ಪೂರೈಕೆ ಹಾಗೂ ಸಂಘದ ಪಶು ಆಹಾರವನ್ನು ಸಂಘದ ಮೂಲಕ ಸದಸ್ಯರು ಖರೀದಿ ಮಾಡುವ ಮೂಲಕ ಸಂಘವೂ ಲಾಭ ಗಳಿಸಲು ಸಾಧ್ಯವಾಯಿತು. ಸದಸ್ಯರ ಮತ್ತು ಸಿಬ್ಬಂದಿಗಳ ಸಂಪೂರ್ಣವಾದ ಸಹಕಾರದ ಅಗತ್ಯವಿದೆ ಎಲ್ಲಾ ಸದಸ್ಯರು ಇನ್ಸೂರೆನ್ಸ್ ಮಾಡಬೇಕಾಗಿ ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ಸಿರಿಲ್ ಪಿಂಟೋ, ನಿರ್ದೇಶಕರಾದ ಕುಶಲಾವತಿ,ಪ್ರವೀಣ ಪೂಜಾರಿ, ಕೆ.ಗಿರಿಯಪ್ಪ ಗೌಡ, ಸಿರಿಲ್ ಪಿಂಟೊ, ಕೇಶವ ಪೂಜಾರಿ, ವಸಂತ ನಾಯ್ಕ,ಯೋಗಿನಿ, ಗಂಗಯ್ಯ ಗೌಡ ಮತ್ತು ರೇಖಾ ಉಪಸ್ಥಿತರಿದ್ದರು.

ಪ್ರತಿದಿನ ಸರಾಸರಿ 2,100 ಲೀಟರ್‌‌‌ ಹಾಲು ಸಂಗ್ರಹಿಸಿ ಒಕ್ಕೂಟಕ್ಕೆ ಒದಗಿಸುತ್ತಿದೆ. ಒಟ್ಟು ವ್ಯವಹಾರ 12,83,02,842.80 ಹಾಗೂ ನಿವ್ವಳ ಲಾಭ 10,27,224.83. ಸಂಘಕ್ಕೆ ಹಾಲು ಪೂರೈಕೆ ಮಾಡುವ ಸದಸ್ಯರಿಗೆ ಲಾಭಾಂಶದ ಶೇಕಡಾ 65 ನ್ನು ಬೋನಸ್ ಆಗಿ ನೀಡಲಾಯಿತು.

ಷೇರು ಡಿವಿಡೆಂಟ್ : ಸಂಘದ ಸದಸ್ಯರಿಗೆ ಶೇಕಡ 9 ಡಿವಿಡೆಂಟ್ ಸಭೆಯಲ್ಲಿ ಘೋಷಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಳಿಯ, ನ್ಯಾಯತರ್ಪು ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಸಂಘಕ್ಕೆ ಸ್ಪಿಕಿಂಗ್ ಸ್ಟೇಂಡ್ ಒಂದನ್ನು ನ್ಯಾಯತರ್ಪು ಪ್ರತಿನಿಧಿ ಸುಮಿತ್ರಾ, ಕಳಿಯ , ಪ್ರತಿನಿಧಿ ಸೌಮ್ಯ, ಪೂಜಾ ಸಮಿತಿ ಅಧ್ಯಕ್ಷ ಸಂಧ್ಯಾ, ನ್ಯಾಯತರ್ಪು ಒಕ್ಕೂಟದ, ಅಧ್ಯಕ್ಷ ಸಿದ್ದಪ್ಪ ಗೌಡ, ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಕೆ. ಪದಾಧಿಕಾರಿಗಳು ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಕೆ ಮಾಡುವ ಸದಸ್ಯರಾದ ಪ್ರಥಮ: ವೀರಪ್ಪ ಪೂಜಾರಿ ದಂಪತಿಗಳು, ದ್ವೀತಿಯ: ಸಂಘದ ಉಪಾಧ್ಯಕ್ಷ ಸಿರಿಲ್ ಪಿಂಟೋ ದಂಪತಿಗಳು, ತೃತೀಯ: ವಲೇರಿಯನ್ ದಂಪತಿ ಸಮೇತ ಗೌರವಿಸಲಾಯಿತು.

ಪ್ರತಿಭಾ ಪುರಸ್ಕಾರ : ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದ ಹತ್ತನೇ ತರಗತಿ ಮತ್ತು ಪಿಯುಸಿ ಯಲ್ಲಿ ಅಧಿಕ ಆಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಂಘದ ಕಾರ್ಯದರ್ಶಿ ಗುಲಾಬಿ ಪಿ. ವಾರ್ಷಿಕ ಸಭೆಯಲ್ಲಿ ವಾಚಿಸಿದರು. ಸಂಘದ ಸಿಬ್ಬಂದಿಗಳಾದ ಗುಮಾಸ್ತೆ ಶಾಲಿನಿ, ಶಾಖೆ ಸಹಾಯಕ ವಿಜಯ ಕುಮಾರ್ ಕೆ., ಹಾಲು ಪರೀಕ್ಷಕ ಸಿದ್ದಪ್ಪ ಗೌಡ, ಮತ್ತು ಕೃ.ಗ.ಕಾರ್ಯಕರ್ತ ಉಮೇಶ ಗೌಡ ಬಿ. ಸಹಕರಿಸಿದರು.

ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಳಿಯ ಸಿ.ಎ.ಬ್ಯಾಂಕ್ ಸಿಬ್ಬಂದಿ ಜಗನ್ನಾಥ ಪ್ರಾರ್ಥನೆ ಹಾಡಿದರು. ಸಂಘದ ನಿರ್ದೇಶಕ ರಂಜನ್ ಹೆಚ್. ಸ್ವಾಗತಿಸಿ, ಸಂಘದ ಸದಸ್ಯ ಉಮೇಶ್ ಕೇಲ್ದಡ್ಕ ಕಾರ್ಯ ನಿರೂಪಿಸಿದರು.
ಸಂಘದ ನಿರ್ದೇಶಕ ನೇವಿಲ್ ಸ್ಟೀವನ್ ಮೋರಸ್ ವಂದಿಸಿದರು.

Related posts

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!