28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಂಬಿನಡ್ಕ ಪರಿಸರದಲ್ಲಿ ಆ.12 ರಂದು ರಾತ್ರಿ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿದೆ.
ದಿಡುಪೆ- ಪೈಚಾರು ರಾಜ್ಯ ಹೆದ್ದಾರಿ ಬದಿಯಿಂದ ಸಂಚರಿಸಿದ ಮರಿಯಾನೆ ಸಹಿತ ಮೂರು ಆನೆಗಳು ಇಲ್ಲಿನ ಕೊಂಬಿನಡ್ಕದಲ್ಲಿ ಚಂದ್ರಕಲಾ ಗೋಖಲೆ ಅವರ ತೋಟದಲ್ಲಿ ಎಂಟು ತೆಂಗಿನ ಮರ, 50ಕ್ಕಿಂತ ಅಧಿಕ ಬಾಳೆ ಗಿಡ ಹಾಗೂ ನೀರಾವರಿ ಪೈಪಲೈನ್ ಗೆ ಹಾನಿ ಉಂಟು ಮಾಡಿವೆ.

ಇದೇ ಪರಿಸರದ ದೇರಣ್ಣ, ಶ್ರೀನಿವಾಸ ಕಾಕತ್ಕರ್ ಸುಶೀಲಾ ಮಲೆಕುಡಿಯ, ಗಣಪತಿ ಭಟ್ ಮೊದಲಾದವರ ಮನೆ ಸಮೀಪದವರೆಗೂ ಸಂಚರಿಸಿರುವ ಕಾಡಾನೆಗಳು ಅಲ್ಲಲ್ಲಿ ಹಾನಿ ಉಂಟು ಮಾಡಿವೆ.
ಮೂರು ದಿನಗಳ ಹಿಂದೆ ಕಾಡಾನೆಗಳ ಹಿಂಡು ಇಲ್ಲಿಂದ ಮೂರು ಕಿ.ಮೀ. ದೂರದ ಕುಳೆಂಜಿರೋಡಿ ಎಂಬಲ್ಲಿ ಮಹೇಂದ್ರ ಪರಾಂಜಪೆ ಅವರ ತೋಟಕ್ಕೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿತ್ತು.

Related posts

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya
error: Content is protected !!