27.7 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಮಾಂಡೋವಿ ಮೋಟಾರ್ಸ್‌ನಲ್ಲಿ ನ್ಯೂ ಬ್ರೆಝಾ ಕಾರು ಬಿಡುಗಡೆ

ಬೆಳ್ತಂಗಡಿ: ಹಲವು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವ ಮಾಂಡೋವಿ ಮೋಟಾರ್ಸ್ ಸಂಸ್ಥೆಯ ಕಕ್ಕಿಂಜೆ ಶೋರೂಮ್‌ನಲ್ಲಿ ನೂತನ ಬ್ರೆಝಾ ಕಾರನ್ನು ಆ.11ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು.

ಕಾರಿನ ಬಿಡುಗಡೆ ಬಳಿಕ ನೂತನ ಬ್ರೆಝಾದಲ್ಲಿ ಅಳವಡಿಸಲಾಗಿರುವ ಆಧುನಿಕ ತಂತ್ರಜ್ಞಾನ, ಸಾಮರ್ಥ್ಯ, ರಸ್ತೆ ಸುರಕ್ಷತಾ ವೈಶಿಷ್ಟ್ಯಗಳು ಸೇರಿದಂತೆ ವಿವಿಧ ವಿಶೇಷತೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಾಂಡೋವಿ ಮೋಟಾರ್ಸ್ ಸೇಲ್ಸ್ ವಿಭಾಗದ ಜಿಎಂ ಶಶಿಧರ ಕಾರಂತ್, ಎಸ್‌ಸಿಡಿಸಿಸಿ ಬ್ಯಾಂಕ್ ಮ್ಯಾನೇಜರ್ ವಿವೇಕ್ ಜೈನ್, ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ. ಕೋಟ್ಯಾನ್, ವಿ& ವಿ ಸಂಸ್ಥೆಯ ಮುಖ್ಯಸ್ಥರಾದ ಬಾಬುರಾಜ್, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ರಾಜೇಶ್, ಉಪನ್ಯಾಸಕ ಜೋಸೆಫ್ ಸೇರಿದಂತೆ ಹಲವರು ಉಪಸ್ಥಿತರಿದ್ದು ಸಂಸ್ಥೆಯ ಸೇವೆ ಹಾಗೂ ನೂತನ ಕಾರಿನ ಕುರಿತು ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದರು.

ನೂತನ ಬ್ರೆಝಾ ಕಾರಿನ ಕೀಲಿಯನ್ನು ಮಹಮ್ಮದ್ ಸಫಾನ್, ಶಾಜಿ ಜೋಸೆಫ್ ಹಾಗೂ ಹಾರಿಸ್ ಅವರಿಗೆ ಹಸ್ತಾಂತರಿಸಲಾಯಿತು.

ಸಹಾಯಕ ಸೇಲ್ಸ್ ಮ್ಯಾನೇಜರ್ ಸುಜಿತ್ ಸ್ವಾಗತಿಸಿದರು. ಟೀಮ್ ಮ್ಯಾನೇಜರ್ ಚರಣ್ ಕುಮಾರ್ ವಂದಿಸಿದರು. ನವೀನ್ ಕುಮಾರ್, ಸಾಬು ಜೋಸೆಫ್, ಡೇಸಿಕ್, ಬಾಷಾ, ಲತೇಶ್ ಬಳಂಜ ಹಾಗೂ ಇನ್ನಿತರರು ಸಹಕರಿಸಿದರು.

Related posts

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya
error: Content is protected !!