28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ತಾತ್ಕಾಲಿಕ ಕೆ.ಜಿ ರೂ.10 ರೂ ಹಾಗೂ ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ವಿಧಾನಸಭೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಹರಿಸಬೇಕೆಂದು ಶಾಸಕ ಹರೀಶ್ ಪೂಂಜರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

ನಂತರ ಕೋಳಿ ಸಾಕಾಣಿಕೆ ರೈತರು ಮತ್ತು ಖಾಸಗಿ ಕಂಪನಿಯವರ ಜೊತೆ ಸರ್ಕಾರ ಕೈಜೋಡಿಸಿ ಬೆಲೆ ನಿಯಂತ್ರಣ ಕೋಳಿ ಮರಿ ಆಹಾರ ಔಷಧಿ ಮತ್ತು ಲಸಿಕೆ ಇವುಗಳ ಬಗ್ಗೆ ನಿಯಂತ್ರಣ ಸಾಧಿಸಲು ಸರ್ಕಾರ ಮಧ್ಯಸ್ಥಿಕೆ ವಹಿಸಿ , ಕುಕ್ಕುಟ ನಿಯಂತ್ರಣ ಕಾಯ್ದೆ ಜಾರಿಗೆ ತರುವಂತೆ ಹಾಗೂ ಇನ್ನು ಅನೇಕ ಬೇಡಿಕೆಗಳನ್ನು ಶಾಸಕ ಹರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಶಾಸಕ ಹರೀಶ್ ಅವರು ಪಶು ಪಾಲನ ಇಲಾಖೆ ಅಧಿಕಾರಿಗಳಿಗೆ ಫೋನ್ ಮೂಲಕ ಮಾಹಿತಿ ಸಂಗ್ರಹಿಸಿ ನಂತರ ವಿಧಾನಸಭೆ ಅಧಿವೇಶನದ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ ಕೋಳಿ ಸಾಕಾಣಿಕೆ ರೈತರ ಸಮಸ್ಯೆಗಳನ್ನು ಚರ್ಚೆ ಮಾಡಲು ಸಮಯ ಅವಕಾಶ ನೀಡಬೇಕೆಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಮತ್ತು ರೈತರು ಉಪಸ್ಥಿತರಿದ್ದರು.

Related posts

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!