27.7 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲು ಪ್ರವಾಸಿ ತಾಣಕ್ಕೆ ರೋಪ್ ವೇ ನಿರ್ಮಾಣಕ್ಕೆ ಹರೀಶ್ ಕುಮಾರ್ ಒತ್ತಾಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗಡಾಯಿ ಕಲ್ಲು (ಜಮಲಾಬಾದ್ ಕೋಟೆ) ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಘೋಷಿಸಿ ರೋಪ್‌ ವೇ ನಿರ್ಮಾಣ ಮಾಡುವಂತೆ ರಾಜ್ಯ ಪ್ರವಾಸೋದ್ಯಮ ಸಚಿವರಿಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾ‌ರ್ ಮನವಿ ಮಾಡಿದ್ದಾರೆ.

ಸಮುದ್ರಮಟ್ಟದಿಂದ ಸುಮಾರು 3,000 ಅಡಿ ಎತ್ತರದಲ್ಲಿರುವ ಈ ಕೋಟೆ ತನ್ನ ಐತಿಹಾಸಿಕ ಹಿನ್ನೆಲೆ, ನೈಸರ್ಗಿಕ ಸೌಂದರ್ಯ ಹಾಗೂ ವಿಶಿಷ್ಟ ಭೌಗೋಳಿಕ ವೈಶಿಷ್ಟ್ಯ ಗಳಿಂದ ಅಪಾರ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೊಂದಿದೆ. ಈ ಐತಿಹಾಸಿಕ ಸ್ಮಾರಕವು ಕರ್ನಾಟಕ ಸರಕಾರದ ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಅಧೀನದಲ್ಲಿ ಸಂರಕ್ಷಣೆ ಮತ್ತು ನಿರ್ವಹಣೆಗೆ ಒಳಪಟ್ಟಿದೆ.

ಈ ಕೋಟೆಯನ್ನು ತಲುಪಲು ಸುಮಾರು 500 ಮೀಟರ್ ದೂರದ ಬಂಡೆ ಹತ್ತಿ ಹಾಗೂ ಸುಮಾರು 2,000 ಕಲ್ಲಿನಲ್ಲಿ ಕೆತ್ತಲಾದ ಮೆಟ್ಟಿಲುಗಳಿದ್ದು, ಇದು ಆ ಕಾಲದ ವಾಸ್ತುಶಿಲ್ಪ ಹಾಗೂ ಎಂಜಿನಿಯರಿಂಗ್ ಕೌಶಲ್ಯದ ಅದ್ಭುತ ನಿದರ್ಶನ ವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ದೊರೆಯುವುದರೊಂದಿಗೆ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, ಸ್ಥಳೀಯ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ದೊರೆಯಲಿದೆ. ಅಲ್ಲದೆ, ಪ್ರವಾಸಿಗರ ಸಂಖ್ಯೆ ಹೆಚ್ಚುವುದರಿಂದ ಇತರ ಪ್ರವಾಸೋದ್ಯಮ ಚಟುವಟಿಕೆಗಳ ಮೂಲಕ ಆದಾಯವೂ ಹೆಚ್ಚಾಗಲಿದೆ. ಜತೆಗೆ ಈ ಅಮೂಲ್ಯ ಐತಿಹಾಸಿಕ ಪರಂಪರೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲಿ ಪರಿಚಯಿಸುವ ಅವಕಾಶವೂ ಲಭಿಸಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!