28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಭವನದಲ್ಲಿ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ: ಮನಸೆಳೆದ 8 ವರ್ಷದ ಪೋರನ ಆಟಿ ಕಳೆಂಜ ವೇಷ

ಬೆಳ್ತಂಗಡಿ: ವಕೀಲರ ಸಂಘ (ರಿ) ಬೆಳ್ತಂಗಡಿ ವತಿಯಿಂದ ತುಳುನಾಡ ಸಂಸ್ಕಾರ, ಸಂಸ್ಕೃತಿ, ಕೃಷಿ ಕಾಯಕ, ಜನರ ಆಚಾರ-ವಿಚಾರ, ಆಹಾರ ಪದ್ಧತಿಯ ವೈಶಿಷ್ಟ್ಯಗಳನ್ನು ಪುನರಪಿ ನೆನಪಿಸುವ “ಆಟಿದ ನೆಂಪು” ಕಾರ್ಯಕ್ರಮ ಆ.13ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಮುನ್ನ ವೇದಿಕೆಯಲ್ಲಿ ಮಾಲಾಡಿ ಶಶಿಧರ್ ಮತ್ತು ತಂಡದಿಂದ ಆಟಿ ಕಳೆಂಜ ಪ್ರದರ್ಶನ ನಡೆಯಿತು. ಎಂಟು ವರ್ಷದ ಬಾಲಕ ಸಿರಿನ್ ರವರ ಆಟಿ ಕಳೆಂಜ ವೇಷ ಎಲ್ಲಾ ವಕೀಲರುಗಳ ಮನ ಸೆಳೆಯಿತು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ. ಎಂ.ಎಫ್.ಸಿ, ಮನು ಬಿ.ಕೆ. ಅವರು ತೆಂಗಿನ ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ವಕೀಲರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಅಲೋಸಿಯಸ್ ಎಸ್. ಲೋಬೊ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರಾಮ ಲಿಂಗಪ್ಪ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ. ಎಂ.ಎಫ್.ಸಿ, ಬೆಳ್ತಂಗಡಿ, ಶಶಾಂಕ್ ನಾಗೇಂದ್ರ ಭಟ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ, ಬೆಳ್ತಂಗಡಿ, ಶಿವಕುಮಾ‌ರ್ ಎಸ್.ಎಮ್. ಅಧ್ಯಕ್ಷರು, ಹಿರಿಯ ಸಮಿತಿ ವಕೀಲರ ಸಂಘ ಬೆಳ್ತಂಗಡಿ, ಶ್ರೀನಿವಾಸ ಗೌಡ ಉಪಾಧ್ಯಕ್ಷರು, ವಕೀಲರ ಸಂಘ ಬೆಳ್ತಂಗಡಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ, ಉಜಿರೆ ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ. ಮಹಾವೀರ ಜೈನ್ ಅವರು ಆಟಿ ತಿಂಗಳ ವಿಶೇಷತೆಯ ಬಗ್ಗೆ ಮಾಹಿತಿ ನೀಡಿದರು.

ವಿಶೇಷ ಆಕರ್ಷಣೆ : ವಿವಿಧ ಬಗೆಯ ಆಟಿಯ ತಿಂಡಿ ತಿನಸುಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಸ್ವಾಗತಿಸಿ, ಖಜಾಂಜಿ ಮುಲ್ತಾಜ್ ಬೇಗಂ ವಂದಿಸಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ವಸಂತ ಮರಕಡ, ಹರ್ಷಿತ್ ಕುಮಾರ್ ಹೆಚ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya
error: Content is protected !!