28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಂಬಿನಡ್ಕ ಪರಿಸರದಲ್ಲಿ ಆ.12 ರಂದು ರಾತ್ರಿ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿದೆ.
ದಿಡುಪೆ- ಪೈಚಾರು ರಾಜ್ಯ ಹೆದ್ದಾರಿ ಬದಿಯಿಂದ ಸಂಚರಿಸಿದ ಮರಿಯಾನೆ ಸಹಿತ ಮೂರು ಆನೆಗಳು ಇಲ್ಲಿನ ಕೊಂಬಿನಡ್ಕದಲ್ಲಿ ಚಂದ್ರಕಲಾ ಗೋಖಲೆ ಅವರ ತೋಟದಲ್ಲಿ ಎಂಟು ತೆಂಗಿನ ಮರ, 50ಕ್ಕಿಂತ ಅಧಿಕ ಬಾಳೆ ಗಿಡ ಹಾಗೂ ನೀರಾವರಿ ಪೈಪಲೈನ್ ಗೆ ಹಾನಿ ಉಂಟು ಮಾಡಿವೆ.

ಇದೇ ಪರಿಸರದ ದೇರಣ್ಣ, ಶ್ರೀನಿವಾಸ ಕಾಕತ್ಕರ್ ಸುಶೀಲಾ ಮಲೆಕುಡಿಯ, ಗಣಪತಿ ಭಟ್ ಮೊದಲಾದವರ ಮನೆ ಸಮೀಪದವರೆಗೂ ಸಂಚರಿಸಿರುವ ಕಾಡಾನೆಗಳು ಅಲ್ಲಲ್ಲಿ ಹಾನಿ ಉಂಟು ಮಾಡಿವೆ.
ಮೂರು ದಿನಗಳ ಹಿಂದೆ ಕಾಡಾನೆಗಳ ಹಿಂಡು ಇಲ್ಲಿಂದ ಮೂರು ಕಿ.ಮೀ. ದೂರದ ಕುಳೆಂಜಿರೋಡಿ ಎಂಬಲ್ಲಿ ಮಹೇಂದ್ರ ಪರಾಂಜಪೆ ಅವರ ತೋಟಕ್ಕೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿತ್ತು.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!