August 14, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ನೀಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕರ್ನಾಟಕದಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಕ್ಷೇತ್ರಕ್ಕೆ ಕಳುಹಿಸಿದ ಏಕೈಕ ಪ್ರಮುಖ ಶಿಕ್ಷಣ ಸಂಸ್ಥೆ ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ ಇದರ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಗ್ಯಾರಂಟಿ ನ್ಯೂಸ್ ಕನ್ನಡ’ ವತಿಯಿಂದ ‘ಆರೋಗ್ಯ ರತ್ನ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಎಕ್ಸೆಲ್ ಸಂಸ್ಥೆಯ ಮೂಲಕ ಸಲ್ಲಿಸುತ್ತಿರುವ ಗಣನೀಯ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸುತ್ತಿರುವುದನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಸುಮಂತ್ ಕುಮಾರ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಆದ್ಯತೆ ನೀಡಿ, ಗುಣಮಟ್ಟದ ಶಿಕ್ಷಣದ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಎಕ್ಸೆಲ್ ಸಂಸ್ಥೆ ಗಮನ ಸೆಳೆಯುತ್ತಿದೆ. ಸಂಸ್ಥೆಯ ಸಾಧನೆಗೆ ಈ ಪ್ರಶಸ್ತಿ ಮತ್ತೊಂದು ಗೌರವದ ಗರಿಮೆಯನ್ನು ತಂದಿದೆ.

ಈ ಸಂದರ್ಭದಲ್ಲಿ ಗ್ಯಾರಂಟಿ ನ್ಯೂಸ್ ನ ಮುಖ್ಯಸ್ಥರು, ಎಕ್ಸೆಲ್ ಶಿಕ್ಷಣ ಸಂಸ್ಥೆಯ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya
error: Content is protected !!