27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ಆ.12 ರಂದು ”ತುಳುವೆರೆ ಆಟಿ” ವಿಶೇಷ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಮ್ ಐ.ಟಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ ರವೀಶ್ ಪಡುಮಲೆ ಮಾತನಾಡಿದರು. ಪರಶುರಾಮ ಸೃಷ್ಟಿಯ ಈ ತುಳುನಾಡಿನಲ್ಲಿ ಆಟಿಯ ಆಚಾರಣೆ ವಿಶಿಷ್ಟ ಹಿನ್ನೆಲೆಯನ್ನು ಹೊಂದಿದೆ.

ಹಿರಿಯರ ಕಾಲದಲ್ಲಿ ಆಟಿ ತಿಂಗಳು ಎಂದರೆ ಅದು ಕಷ್ಟದ ಸಮಯ. ಆದರೆ ಈಗ ಕಾಲ ಬದಲಾಗಿದೆ , ಈಗ ಎಲ್ಲೆಲ್ಲಿಯೋ ಆಟಿದ ಕೂಟ, ಕೆಸರಡೂಂಜಿ ದಿನ ಈ ರೀತಿಯ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತದೆ ಆದರೆ ಮುಖ್ಯವಾಗಿ ನಾವು ನಮ್ಮ ಹಿರಿಯರ ಕಷ್ಟ ಅವರ ಬದುಕು ಆಚರಣೆ ಸಂಸ್ಕೃತಿಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್‌. ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ವಿಶ್ವನಾಥ್ ಪಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಿಭಾಗ ಮುಖ್ಯಸ್ಥ ಡಾ. ಸನ್ಮತಿ ಕುಮಾರ್ ಸ್ವಾಗತಿಸಿ, ತೃತೀಯ ವರ್ಷದ ವಿದ್ಯಾರ್ಥಿಗಳಾದ ಸುಶೀರ ನಿರೂಪಿಸಿ, ನಿಶ್ಮಿತಾ ವಂದಿಸಿದರು.

ಉಪನ್ಯಾಸಕಿ ಡಾ.ಸಾಜಿದ, ವಿದ್ಯಾರ್ಥಿ ಪ್ರತಿನಿಧಿಗಳಾದ ಕಿರಣ್ಮಯಿ, ಮಿಥುನ್ ಮತ್ತು ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ತಿಂಡಿಗಳನ್ನು ವಿತರಿಸಲಾಯಿತು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
error: Content is protected !!