27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ, ನಾಲ್ಕೂರು ಗ್ರಾಮಸ್ಥರ ಸಮಾಲೋಚನ ಸಭೆ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ನಾಲ್ಕೂರು ಸಮಿತಿಯ ಸಮಾಲೋಚನಾ ಸಭೆಯು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಆ 13ರಂದು ನಡೆಯಿತು.

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿರವರು ಕಸ್ತೂರಿ ರಂಗನ್ ವರದಿ ಮತ್ತು 7 ನೇ ಕರಡು ಅಧಿಸೂಚನೆಯ ಪರಿಸರ ಸೂಕ್ಷ್ಮ ವಲಯ ಯೋಜನೆಯಿಂದ ಎದುರಗುವ ಸಮಸ್ಯೆಗಳು ಮತ್ತು ಬೇಡಿಕೆಯನ್ನು ಕಾರ್ಯಕರ್ತರಿಗೆ ತಿಳಿಸಿದರು. ವೈಯಕ್ತಿಕ ಮತ್ತು ಸಂಘ ಸಂಸ್ಥೆ ಗಳ ಮೂಲಕ ಗ್ರಾಮ ಪಂಚಾಯತ್ ಗಳಿಗೆ ಆಕ್ಷೇಪನೆಪತ್ರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು . ಆ. 20 ರಂದು ಹೋರಾಟದ ರೂಪುರೆಷೆಯ ಸಭೆ ಸುಬ್ರಮಣ್ಯದಲ್ಲಿ ನಡೆಸಲು ತೀರ್ಮಾನಿಸಲಾಯಿತು.

ಜಿಲ್ಲಾ ಪ್ರಮುಖರಾದ ದಾಮೋಧರ್ ಗುಂಡ್ಯ, ಮಿಲನ್ ಬಾಳಿಕಳ, ಮಾಧವ ಶಿರ್ಲಾಲು, ಉಮೇಶ್ ಸುವರ್ಣ, ರವಿ ಪೂಜಾರಿ ಸುಲ್ಕೇರಿ, ವಿಜಯ್ ಕುಮಾರ್ ನಾವರ ಹಾಗೂ ನಾಲ್ಕೂರಿನ ಗ್ರಾಮಸ್ಥರು, ಮತ್ತು ಜಿಲ್ಲಾ ಪ್ರಮುಖರು, ರೈತ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿ ರಚಿಸಲಾಗಿದ್ದು ಸಂಚಾಲಕರಾಗಿ ಕರುಣಾಕರ ಹೆಗ್ಡೆ, ಉಪ ಸಂಚಾಲಕರಾಗಿ ದಿನೇಶ್ ಪಿಕೆ ಮತ್ತು ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.

Related posts

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya
error: Content is protected !!