August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ

ಬೆಳ್ತಂಗಡಿ: ಕರಂಬಾರು ಗ್ರಾಮದ ಕೇಳ್ಕರದಿಂದ ಕಲ್ಲಮೆಯಾಗಿ ಮುಂಡೂರನ್ನು ಸಂಪರ್ಕಿಸುವ ರಸ್ತೆ ಪೂರ್ತಿ ಕೆಸರುಮಯವಾಗಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.

ಕಳೆದ 10 ವರ್ಷಗಳಿಂದ ಈ ರಸ್ತೆ ಡಮಾರು ಕಂಡಿಲ್ಲ, ಈ ಭಾಗದಲ್ಲಿ ಸುಮಾರು 40 ಮನೆಗಳಿದ್ದು, ಈ ರಸ್ತೆಯನ್ನು ಅವಲಂಭಿಸಿದ್ದಾರೆ.
ರಸ್ತೆ ಹಾಳಾಗಿದ್ದರಿಂದ ಶಾಲಾ ಬಸ್ ಇದರಲ್ಲಿ ಬರುವುದಿಲ್ಲ. ಹೀಗಾಗಿ ಶಾಲಾ ಮಕ್ಕಳು ಸ್ವಲ್ಪ ದೂರ ನಡೆದುಕೊಂಡು ಬಂದು ಬಸ್‌ನಲ್ಲಿ ಹೋಗಬೇಕಾದ ಪರಿಸ್ಥಿತಿಯಿದೆ.


ಈ ಕೆಸರುಮಯ ರಸ್ತೆಯಲ್ಲಿ ನಡೆಯುವಾಗ ಜಾರಿ ಬಿದ್ದರೆ ಮರಳಿ ಮನೆಗೇ ಬರಬೇಕು. ಪ್ರತೀ ವರ್ಷ ಸ್ಥಳೀಯರೊಬ್ಬರು ತಮ್ಮ ಸ್ವಂತ ಖರ್ಚಿನಲ್ಲಿ ಶ್ರಮದಾನದ ಮೂಲಕ ಮಳೆಗಾಲದಲ್ಲಿ ರಸ್ತೆ ರಿಪೇರಿ ಮಾಡಿಸುತ್ತಿದ್ದರು. ಆದರೆ ಈ ಬಾರಿ ಇದರ ದುರಸ್ತಿ ನಡೆಯದಿರುವುದರಿಂದ ರಸ್ತೆ ಕೆಸರುಮಯವಾಗಿದೆ. ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

Related posts

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya
error: Content is protected !!