27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ನಾವೂರು ಎ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆ ಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದರವರು ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಆಹಾರ ಪದ್ಧತಿಯನ್ನುಉಳಿಸುವ ಈ ಮಾಹಿತಿ ಕಾರ್ಯಕ್ರಮ ಉತ್ತಮವಾಗಿದ್ದು ಇದರ ಪ್ರಯೋಜನವನ್ನು. ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಮಲ್ಲಿಕಾ ಮಹಿಳೆಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಇದ್ದರೆ ಅವರ ಕುಟುಂಬಕ್ಕೆ ಉತ್ತಮ ಪೌಷ್ಟಿಕ ಆಹಾರ ದೊರೆಯಲು ಸಾಧ್ಯ. ಮಕ್ಕಳಿಗೆ ಅವರಿಗೆ ಇಷ್ಟವಾಗುವ ರೀತಿಯಲ್ಲಿ ಪೌಷ್ಟಿಕ ಆಹಾರ ತಯಾರಿ ಮಾಡಿ ನಾವು ನೀಡಿದ್ದಲ್ಲಿ ಮಕ್ಕಳು ಇಷ್ಟಪಟ್ಟು ತಿನ್ನುತ್ತಾರೆ. ಇವತ್ತಿನ ಕಾರ್ಯಕ್ರಮ ಉತ್ತಮವಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾದ ರತ್ನಾವತಿ ರವರು ಕೇಸರಿ ಬಿಳಿ ಹಸಿರು ತರಕಾರಿ ಸೇವನೆ ಬಗ್ಗೆ ಸೊಪ್ಪು ಕಾಳು ತರಕಾರಿಯಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಹಾಗೂ ನಾವು ನಮಗಾಗಿ ಪೌಷ್ಟಿಕ ಆಹಾರ ತಯಾರಿ ಮಾಡಬೇಕು. ಆಗ ನಮ್ಮ ಆರೋಗ್ಯದೊಂದಿಗೆ ನಮ್ಮ ಕುಟುಂಬದ ಸದಸ್ಯರ ಆರೋಗ್ಯ ಉತ್ತಮವಾಗಿರಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಮೇಘನಾ ಹಾಗೂ ವಲಯ ಮೇಲ್ವಿಚಾರಕರಾದ ಉಷಾಪ್ರಸಾದ್ ಸಂಯೋಜಕಿ ಶೃತಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ನಿರ್ಮಲಾ ಸ್ವಾಗತಿಸಿ, ಸೇವಪ್ರತಿನಿಧಿ ಸುನೀತಾ ಧನ್ಯವಾದ ನೀಡಿದರು.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!